×
Ad

ಕುಂದಾಪುರ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹ

Update: 2018-05-17 19:21 IST

ಕುಂದಾಪುರ, ಮೇ 17: ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟ ಗೊಂಡ ಬಳಿಕ ಕುಂದಾಪುರ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರು ಮಹಿಳೆ ಸಹಿತ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಹಲ್ಲೆ ನಡೆಸಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಇಂಟಕ್ ರಾಜ್ಯಾಧ್ಯಕ್ಷ ಹಾಗೂ ಕುಂದಾ ಪುರ ಕಾಂಗ್ರೆಸ್ ಅಭ್ಯರ್ಥಿ ಯಾಗಿದ್ದ ರಾಕೇಶ್ ಮಲ್ಲಿ ಒತ್ತಾಯಿಸಿದ್ದಾರೆ.

ಕುಂದಾಪುರ ಕಾಂಗ್ರೆಸ್ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಬಿಜೆಪಿ ಕಾರ್ಯಕರ್ತರು ಶಂಕರನಾರಾಯಣ, ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಮನೆ ಮುಂದೆ ವಿಜಯೋತ್ಸವ ಆಚರಿಸಿದ್ದು, ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿದವರನ್ನು ಗುರುತಿಸಿ ಹಲ್ಲೆ ನಡೆಸಿದ್ದಾರೆ. ಈ ಕುರಿತು ಸಂಬಂಧಪಟ್ಟ ಠಾಣೆಗಳಿಗೆ ದೂರು ನೀಡಲಾಗಿದೆ. ಅಲ್ಲದೇ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೂ ಮನವಿ ಸಲ್ಲಿಸಲಾ ಗುವುದು. ಈ ಬಗ್ಗೆ ಕ್ರಮ ತೆಗೆದುಕೊಳ್ಳದಿದ್ದರೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ ಮಾತ ನಾಡಿ, ಈ ಬಗ್ಗೆ ಪಕ್ಷದ ಸ್ಥಳೀಯ ನಾಯಕರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಆದರೆ ಈ ಬಗ್ಗೆ ಯಾವುದೇ ರಾಜಿ ಸಂಧಾನ ಮಾಡಿಕೊಳ್ಳುವುದಿಲ್ಲ. ನಮ್ಮ ಪಕ್ಷದವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕಾನೂನು ಹೋರಾಟ ನೆಸಲಾಗುವುದು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಹಲ್ತೂರಿನ ಲಕ್ಷ್ಮೀ ಪೂಜಾರ್ತಿ, ಕಾಂಗ್ರೆಸ್‌ನ ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಮಾಣಿ ಗೋಪಾಲ, ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ಪುತ್ರನ್, ನಗರಾಧ್ಯಕ್ಷ ಗಣೇಶ ಶೇರಿಗಾರ್, ಐಟಿ ಸೆಲ್‌ನ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ್ ಶೆಟ್ಟಿ, ವಿನೋದ್ ಕ್ರಾಸ್ತ ಉಪಸ್ಥಿತರಿದ್ದರು.

ಮಹಿಳೆಯರ ಮೇಲೂ ಹಲ್ಲೆ
‘ಮನೆಯಲ್ಲಿ ಮಹಿಳೆಯರೆಲ್ಲ ಇರುವಾಗ ಬಿಜೆಪಿ ಕಾರ್ಯಕರ್ತರು ಬಂದು ಪಟಾಕಿ ಸಿಡಿಸಿ, ಬುಲೆಟ್ ಬೈಕ್‌ನಿಂದ ಜೋರು ಶಬ್ದ ಮಾಡಿದರು. ಮನೆಯಲ್ಲಿ 5 ತಿಂಗಳ ಮಗು ಇರುವುದರಿಂದ ಈ ರೀತಿ ಶಬ್ದ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ ದ್ದೇನೆ. ಅದೇ ಕಾರಣಕ್ಕೆ ಮರುದಿನ 20-25 ಮಂದಿ ಬಿಜೆಪಿಯ ಯುವಕರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಅಲ್ಲದೆ ಮನೆಯಲ್ಲಿರುವ ಮಹಿಳೆಯರ ಮೇಲೂ ಹಲ್ಲೆ ನಡೆಸಿದ್ದಾರೆ. ಅವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕು’ ಎಂದು ಹಲ್ಲೆಗೊಳಗಾದ ಹಲ್ತೂರಿನ ವಿಜಯ ಪೂಜಾರಿ ಆಗ್ರಹಿಸಿದರು.

ಅಪಪ್ರಚಾರದಿಂದ ಸೋಲು
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದೆ. ಆದರೆ ಬಿಜೆಪಿಯ ಅಪಪ್ರಚಾರದಿಂದಾಗಿ ನಮಗೆ ಸೋಲಾಗಿದೆ. ನನ್ನನ್ನು ಹೊರಗಿನವನು ಎಂದು ಬಿಜೆಪಿಯವರು ಅಪಪ್ರಚಾರ ನಡೆಸಿದರು. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷವನ್ನು ಸಂಘಟಿಸಲಾಗುವುದು ಎಂದು ಕುಂದಾಪುರ ಕಾಂಗ್ರೆಸ್ ಅಭ್ಯರ್ಥಿ ರಾಕೇಶ್ ಮಲ್ಲಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News