ಕೊಲ್ಲರಕೋಡಿ: ಮದ್ರಸಕ್ಕೆ ಕಲ್ಲೆಸೆತ
Update: 2018-05-18 09:26 GMT
ಕೊಣಾಜೆ, ಮೇ 18: ಮದ್ರಸಕ್ಕೆ ಕಲ್ಲು ತೂರಾಟ ನಡೆಸಿದ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ನರಿಂಗಾನ ಗ್ರಾಮದ ಕೊಲ್ಲರಕೋಡಿ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.
ಕೊಲ್ಲರಕೋಡಿಯ ನೂರುಲ್ ಉಲೂಮ್ ಮದ್ರಸಕ್ಕೆ ಗುರುವಾರ ತಡರಾತ್ರಿ ಕಿಡಿಗೇಡಿಗಳು ಕಲ್ಲೆಸೆದು ಪರಾರಿಯಾಗಿದ್ದಾರೆ.
ದುಷ್ಕೃತ್ಯ ನಡೆದ ಕೂಡಲೇ ವಿಷಯ ಅರಿತು ಸ್ಥಳಕ್ಕಾಗಮಿಸಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ದುಷ್ಕರ್ಮಿಗಳ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ ಎನ್ನಲಾಗುತ್ತಿದ್ದು, ಈ ನಿಟ್ಟಿನಲ್ಲಿ ಕೊಣಾಜೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.