ಹಫೀಜ್ ಸಯೀದ್‌ಗೆ ಮತ್ತೆ ಭದ್ರತೆ ಒದಗಿಸಿದ ಪಾಕ್

Update: 2018-05-18 18:31 GMT

ಲಾಹೋರ್, ಮೇ 18: ಮುಂಬೈ ಭಯೋತ್ಪಾದಕ ದಾಳಿಯ ರೂವಾರಿ ಹಾಗೂ ಲಷ್ಕರೆ ತಯ್ಯಬ ಭಯೋತ್ಪಾದಕ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್‌ಗೆ ಪಾಕಿಸ್ತಾನದ ಪಂಜಾಬ್ ಸರಕಾರ ಮತ್ತೆ ಭದ್ರತೆ ನೀಡಿದೆ.

ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಒಂದು ತಿಂಗಳ ಹಿಂದೆ ಭದ್ರತೆಯನ್ನು ಹಿಂದಕ್ಕೆ ಪಡೆಯಲಾಗಿತ್ತು.

''ಪಂಜಾಬ್ ಸರಕಾರದ ಮುಖ್ಯಮಂತ್ರಿ ಶಹಭಾಝ್ ಶರೀಫ್‌ರ ಆದೇಶದಂತೆ ಹಫೀಜ್ ಸಯೀದ್‌ನಿಗೆ ಭದ್ರತೆ ನೀಡುವುದಕ್ಕಾಗಿ ಪೊಲೀಸರನ್ನು ನಿಯೋಜಿಸಲಾಗಿದೆ'' ಎಂದು ಪಂಜಾಬ್ ಸರಕಾರದ ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ಪಿಟಿಐಗೆ ತಿಳಿಸಿದರು.

ಸಯೀದ್‌ನ ಪ್ರಾಣಕ್ಕೆ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News