×
Ad

ಇನ್ನೂ ನಿಗೂಢವಾಗಿರುವ ಇಬ್ಬರು ಶಾಸಕರ ನಡೆ

Update: 2018-05-19 12:15 IST
ಪ್ರತಾಪ್ ಗೌಡ ಪಾಟೀಲ್, ಆನಂದ್ ಸಿಂಗ್

ಬೆಂಗಳೂರು, ಮೇ 19: ಕಾಂಗ್ರೆಸ್ ಶಾಸಕರಾದ ವಿಜಯ ನಗರದ ಆನಂದ್ ಸಿಂಗ್ ಮತ್ತು ಕಂಪ್ಲಿಯ ಪ್ರತಾಪ್ ಗೌಡ ಪಾಟೀಲ್ ಸದನಕ್ಕೆ ಗೈರು ಹಾಜರಾಗಿದ್ದಾರೆ.

ಇಬ್ಬರು ಶಾಸಕರು ತಾಜ್ ವೆಸ್ಟೆಂಡ್  ಹೋಟೆಲ್ ನಲ್ಲಿ ತಂಗಿದ್ದಾರೆ. ಮಧ್ಯಾಹ್ನ 1 ಗಂಟೆಯ ವೇಳೆಗೆ ಅವರು ಸದನಕ್ಕೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ. ಪ್ರಮಾಣವಚನ ಸ್ವೀಕಾರಕ್ಕೆ ಪ್ರತಾಪ್  ಗೌಡ  ಹೆಸರನ್ನು ವಿಧಾನಸಭೆಯ ಕಾರ್ಯದರ್ಶಿ ಕೂಗಿದರೂ, ಅವರು ಆ  ವೇಳೆ ಹಾಜರಿರಲಿಲ್ಲ ಎನ್ನಲಾಗಿದೆ.

ಈ ಮೊದಲು ಬಿಜೆಪಿಯಿಂದ ಕಾಂಗ್ರೆಸ್  ಪಕ್ಷ ಸೇರ್ಪಡೆಗೊಂಡು  ಇದೀಗ  ಕಾಂಗ್ರೆಸ್ ನಿಂದ ಶಾಸಕರಾಗಿ  ಆಯ್ಕೆಯಾಗಿರುವ ಇಬ್ಬರು ಶಾಸಕರ ನಡೆ ನಿಗೂಢವಾಗಿದೆ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News