ಜೆಡಿಎಸ್, ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

Update: 2018-05-19 16:47 GMT

ಉಡುಪಿ, ಮೇ 19: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸದನದಲ್ಲಿ ವಿಶ್ವಾಸ ಮತ ಸಾಬೀತು ಪಡಿಸಲು ವಿಫಲರಾಗಿ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯ ಕರ್ತರು ಸಂಭ್ರಮಾಚರಣೆ ನಡೆಸಿದರು.

ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ವಾಸುದೇವ ರಾವ್, ಮಹಿಳಾ ಅಧ್ಯಕ್ಷೆ ಅನಿತಾ ಶೆಟ್ಟಿ, ಮುಖಂಡ ರಾದ ಪ್ರದೀಪ್ ಜಿ., ರೋಹಿತ್ ಕರಂಬಳ್ಳಿ, ಸಚಿನ್, ರವಿರಾಜ್, ಇಕ್ಬಾಲ್ ಆತ್ರಾಡಿ, ಮುಹಮ್ಮದ್ ಹ್ಯಾರೀಸ್, ದಿಲ್ಶಾದ್, ಐರಿನ್ ಮೊದಲಾದವರು ಉಪಸ್ಥಿತರಿದ್ದರು.

ಅದೇ ರೀತಿ ಬೈಂದೂರು ವಿಧಾನಸಭಾ ಕ್ಷೇತ್ರದ ನಾವುಂದದಲ್ಲಿಯೂ ಜೆಡಿಎಸ್ ಕಾರ್ಯಕರ್ತರು ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಮನ್ಸೂರು ಇಬ್ರಾಹಿಂ, ಕುಂದಾಪುರ ಕಾರ್ಯಾ ಧ್ಯಕ್ಷ ಹುಸೈನ್ ಹೈಕಾಡಿ, ರವಿ ಶೆಟ್ಟಿ, ವಹಬ್ ಮೊದಲಾದವರು ಇದ್ದರು.
ಉಡುಪಿ ಬ್ರಹ್ಮಗಿರಿ ಕಾಂಗ್ರೆಸ್ ಭವನದ ಎದುರು ಕಾಂಗ್ರೆಸ್ ಕಾರ್ಯಕರ್ತ ರು ಸಂಭ್ರಮ ಆಚರಣೆ ನಡೆಸಿದರು. ಅಲ್ಲದೆ ಕುಂದಾಪುರ ಶಾಸ್ತ್ರಿ ಸರ್ಕಲ್ ನಲ್ಲಿಯೂ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News