ಸುಂಟಿಕೊಪ್ಪ: ಜೆಡಿಎಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ
Update: 2018-05-19 16:57 GMT
ಸುಂಟಿಕೊಪ್ಪ,ಮೇ.19: ರಾಜ್ಯ ವಿಧಾನಸಭೆಯ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡುತ್ತಿರುವ ವಿಚಾರ ಬಹಿರಂಗಗೊಳ್ಳುತ್ತಿದ್ದಂತೆ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಜೆಡಿಎಸ್ ಪಕ್ಷದ ಕಾರ್ಯಕರ್ತರು ಕನ್ನಡ ವೃತ್ತದಲ್ಲಿ ಪಕ್ಷದ ಧ್ವಜದೊಂದಿಗೆ ಜಮಾವಣೆಗೊಂಡು ರಾಜ್ಯ ವಿಧಾನಸಭೆಯ ಮುಖ್ಯ ಮಂತ್ರಿಯಾಗಿ ಅಧಿಕಾರ ವಹಿಕೊಂಡ ಬಿ.ಎಸ್. ಯಡಿಯೂರಪ್ಪ ರವರು ವಿಶ್ವಾಸ ಮತಯಾಚಿಸದೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿಲು ತೆರಳುತ್ತಿದ್ದ ವಿಚಾರ ತಿಳಿಯುತ್ತಿದ್ದಂತೆ ಜೆಡಿಎಸ್ ಪಕ್ಷದ ಕಾರ್ಯಕರ್ತರು ಹೆಚ್.ಡಿ.ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಜೈಕಾರಗಳನ್ನು ಕೂಗುತ್ತ ಪಟಾಕಿ ಸಿಡಿಸಿ ಹರ್ಷ ವ್ಯಕ್ತಪಡಿಸಿದರು.
ಈ ಸಂದರ್ಭ ಜಿಲ್ಲಾ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹೆಚ್.ಯು.ಇಸಾಕ್ ಖಾನ್, ನಗರ ಜೆಡಿಎಸ್ ಅಧ್ಯಕ್ಷ ಯಂಕನ ಕೌಶಿಕ್, ಗ್ರಾ.ಪಂ.ಸದಸ್ಯ ಕೆ.ಇ.ಕರೀಂ ಪಕ್ಷದ ಕಾರ್ಯಕರ್ತರು ಇದ್ದರು.