ಗಾಂಜಾ ಪತ್ತೆ : ಇಬ್ಬರ ಬಂಧನ

Update: 2018-05-19 17:03 GMT

ಮಂಗಳೂರು, ಮೇ 19: ಆಂಧ್ರಪ್ರದೇಶದಿಂದ ಗಾಂಜಾವನ್ನು ಮಂಗಳೂರು ನಗರಕ್ಕೆ ತಂದು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನುಗಾಂಜಾ ಸಮೇತ ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಕೇರಳ ಕಣ್ಣೂರು ಜಿಲ್ಲೆಯ ಜುನೈದ್ (30) ಮತ್ತು ಪುತ್ತೂರಿನ ಕುದ್ಮಾರ್‌ನ ಅಬ್ದುಲ್ ಕರೀಂ (25) ಎಂದು ಗುರುತಿಸಲಾಗಿದೆ.

ಬಂಧಿತರಿಂದ 9.5 ಕೆ.ಜಿ. ಗಾಂಜಾ 2 ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 2,39,000 ರೂ. ಎಂದು ಅಂದಾಜಿಸಲಾಗಿದೆ. ಆಂಧ್ರ ಪ್ರದೇಶದಿಂದ ಬೆಂಗಳೂರು ಮೂಲಕ ಅಕ್ರಮವಾಗಿ ಗಾಂಜಾವನ್ನು ಮಂಗಳೂರು ನಗರಕ್ಕೆ ತಂದು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಶನಿವಾರ ಪಂಪ್‌ವೆಲ್ ಬಳಿ ಬಂಧಿಸಿದ್ದಾರೆ. ಆರೋಪಿಗಳನ್ನು ಹಾಗೂ ಗಾಂಜಾವನ್ನು ಮುಂದಿನ ಕ್ರಮಕ್ಕಾಗಿ ಕದ್ರಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News