ಲಾಲು ಪ್ರಸಾದ್‌ಗೆ ಅನಾರೋಗ್ಯ: ಪಾಟ್ನಾ ಆಸ್ಪತ್ರೆಗೆ ದಾಖಲು

Update: 2018-05-19 17:06 GMT

ಪಾಟ್ನಾ, ಮೇ 19: ಉಸಿರಾಟದ ತೊಂದರೆ ಹಾಗೂ ಎದೆ ನೋವಿನ ಹಿನ್ನೆಲೆಯಲ್ಲಿ ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಅವರನ್ನು ಶನಿವಾರ ಇಲ್ಲಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.

ಲಾಲು ಪ್ರಸಾದ್ ಅವರಿಗೆ ಇದ್ದಕ್ಕಿದ್ದಂತೆ ಉಸಿರಾಟದ ತೊಂದರೆ ಹಾಗೂ ಎದೆ ನೋವು ಕಾಣಿಸಿಕೊಂಡಿತು. ಕೂಡಲೇ ಅವರನ್ನು ಇಂದಿರಾಗಾಂಧಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಆರ್‌ಜೆಡಿ ನಾಯಕ ಬೋಲಾ ಯಾದವ್ ಹೇಳಿದ್ದಾರೆ. ಲಾಲು ನಿಗಾದಲ್ಲಿ ಇದ್ದಾರೆ. ಲಾಲು ಅವರಿಗೆ ಹಲವು ರೀತಿಯ ಅನಾರೋಗ್ಯದ ಸಮಸ್ಯೆಗಳಿಗೆ ಎಂದು ಅವರು ತಿಳಿಸಿದ್ದಾರೆ. ಮೇವು ಹಗರಣಕ್ಕೆ ಸಂಬಂಧಿಸಿ ಬಿರ್ಸಾ ಮುಂಡ ಕೇಂದ್ರ ಕಾರಾಗೃಹದಲ್ಲಿ ಕಳೆದ ಐದು ತಿಂಗಳಿಂದ ಶಿಕ್ಷೆ ಅನುಭವಿಸುತ್ತಿರುವ ಲಾಲು ಪ್ರಸಾದ್ ಕಳೆದ ವಾರದ ಆರಂಭದಲ್ಲಿ ಜಾಮೀನು ಮೇಲೆ ಹೊರಗೆ ಬಂದಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News