ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2018-05-19 17:07 GMT

ಕೊಲ್ಲೂರು, ಮೇ 19: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಜಡ್ಕಲ್ ಗ್ರಾಮದ ಬೀಸಿನಪಾರೆ ಗೋಳಿಗುಡ್ಡೆ ನಿವಾಸಿ ರಾಜು ಎಂಬವರ ಮಗಳು ಜಯಾಮೋಳ್(27) ಎಂಬವರು ಮೇ 18ರಂದು ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ.

ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಂಕರನಾರಾಯಣ: ವೈಯಕ್ತಿಕ ಕಾರಣದಿಂದ ಮನನೊಂದ ಜಾಂಬ್ಳಿ ಗ್ರಾಮದ ಚಿತ್ತೇರಿ ನಿವಾಸಿ ದೇವೆಂದ್ರ ನಾಯ್ಕ(55) ಎಂಬವರು ಮೇ 18ರಂದು ಸಂಜೆ ವೇಳೆ ಮನೆಯ ಹತ್ತಿರದ ಹಾಡಿಯ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕರನಾರಾಯಣ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News