ಶಿವಯೋಗಿ ಸ್ವಾಮಿ ಅಂತ್ಯಸಂಸ್ಕಾರದಲ್ಲಿ ಯಡಿಯೂರಪ್ಪ ಭಾಗಿ
Update: 2018-05-20 15:15 GMT
ಬೆಂಗಳೂರು, ಮೇ 20: ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದಲ್ಲಿ ಸೋಮವಾರ ನಡೆಯಲಿರುವ ಚಿತ್ತರಗಿಯ ಜಯ ಮಹಾಂತೇಶ್ವರ ಸಂಸ್ಥಾನದ ಪೀಠಾಧ್ಯಕ್ಷ ಡಾ.ಮಹಾಂತೇಶ ಶಿವಯೋಗಿ ಸ್ವಾಮೀಜಿಯ ಅಂತ್ಯ ಸಂಸ್ಕಾರ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಾಲ್ಗೊಳ್ಳಲಿದ್ದಾರೆ.
ಪೂರ್ವ ನಿಗದಿತ ಕಾರ್ಯಕ್ರಮದಂತೆ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮೇ 21(ಸೋಮವಾರ) ರಂದು ದಿಲ್ಲಿಗೆ ತೆರಳುತ್ತಿರುವ ಹಿನ್ನೆಲೆಯಲ್ಲಿ, ಅವರ ಪರವಾಗಿ ರಾಜ್ಯ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅಂತ್ಯ ಸಂಸ್ಕಾರದಲ್ಲಿ ಭಾಗಿಯಾಗಲಿದ್ದು, ಸ್ವಾಮೀಜಿ ಅವರ ಅಂತ್ಯ ಸಂಸ್ಕಾರವು ರಾಜ್ಯ ಸರಕಾರದ ಸಕಲ ಗೌರವಗಳೊಡನೆ ನಡೆಯಲಿದೆ ಎಂದು ಮುಖ್ಯಮಂತ್ರಿ ಅಪರ ಮುಖ್ಯ ಕಾರ್ಯದರ್ಶಿ ಎಂ.ಲಕ್ಷ್ಮೀನಾರಾಯಣ ಪ್ರಕಟನೆಯಲ್ಲಿ ತಿಳಿಸಿದ್ದಾರೆ.