×
Ad

ಮರವಂತೆ ಬಳಿ ಕಾರು ಢಿಕ್ಕಿ: ಬೈಕ್ ಸವಾರ ಮೃತ್ಯು

Update: 2018-05-20 21:39 IST

ಗಂಗೊಳ್ಳಿ, ಮೇ 20: ಕಾರು ಹಾಗೂ ಬೈಕ್ ಮಧ್ಯೆ ಮರವಂತೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರವಿವಾರ ಸಂಜೆ 7:30ರ ಸುಮಾರಿಗೆ ಸಂಭವಿಸಿದ ಅಪಘಾತ ದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಬೈಕ್ ಬೆಂಕಿಯಿಂದ ಹೊತ್ತಿ ಉರಿದು ಸಂಪೂರ್ಣ ಭಸ್ಮವಾಗಿರುವ ಬಗ್ಗೆ ವರದಿಯಾಗಿದೆ.

ಮೃತರನ್ನು ಬೈಂದೂರು ಸಮೀಪದ ತಗ್ಗರ್ಸೆಯ ಪುನಿತ್ ಪೂಜಾರಿ (22) ಎಂದು ಗುರುತಿಸಲಾಗಿದೆ. ಹಿಂಬದಿ ಸವಾರ ಆಕಾಶ್ ಎಂಬವರು ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರು ಬೆಂಗಳೂರು ಮೂಲದ ವೈದ್ಯರದ್ದಾಗಿದ್ದು, ಅದರಲ್ಲಿದ್ದವರಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಕುಂದಾಪುರ ಕಡೆಯಿಂದ ಬೈಂದೂರು ಕಡೆ ಹೋಗುತ್ತಿದ್ದ ಬೈಕ್‌ಗೆ ಬೈಂದೂರು ಕಡೆಯಿಂದ ಬರುತ್ತಿದ್ದ ಕಾರು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಬೈಕ್‌ನಲ್ಲಿದ್ದವರು ರಸ್ತೆಗೆ ಎಸೆಯಲ್ಪಟ್ಟು, ಗಂಭೀರವಾಗಿ ಗಾಯಗೊಂಡ ಸವಾರ ಪುನಿತ್ ಮೃತಪಟ್ಟರು.

ಅಪಘಾತದಿಂದ ಸಂಪೂರ್ಣ ನುಜ್ಜುಗುಜ್ಜಾದ ಬೈಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸಂಪೂರ್ಣ ಬೆಂಕಿಗೆ ಅಹುತಿಯಾಗಿ ಸುಟ್ಟು ಹೋಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪುನಿತ್ ಪೂಜಾರಿ ನಿನ್ನೆಯಷ್ಟೆ ಈ ಹೊಸ ಬೈಕ್ ಖರೀದಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News