ವಾಯುಭಾರ ಕುಸಿತ : ಮೀನುಗಾರರಿಗೆ ಎಚ್ಚರಿಕೆ

Update: 2018-05-21 16:13 GMT

ಉಡುಪಿ, ಮೇ 21: ಅರಬಿಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಮುಂದಿನ 48 ಗಂಟೆಗಳ ಕಾಲ ರಾಜ್ಯದ ಪಶ್ಚಿಮ ಕರಾವಳಿಯಲ್ಲಿ ಗಂಟೆಗೆ 45ರಿಂದ 55ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಇದರಿಂದ ಸಮುದ್ರವೂ ಪ್ರಕ್ಷುಬ್ಧಗೊಳ್ಳಲಿದ್ದು, ದೊಡ್ಡ ತೆರೆಗಳು ದಡವನ್ನು ಅಪ್ಪಳಿಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News