ಬೆಂಗಳೂರು: ಭದ್ರತಾ ಸಿಬ್ಬಂದಿಯನ್ನು ಬೆದರಿಸಿ ದರೋಡೆ

Update: 2018-05-21 16:21 GMT

ಬೆಂಗಳೂರು, ಮೇ 21: ಕೆಲಸ ಮುಗಿಸಿಕೊಂಡು ಸೈಕಲ್ ನಲ್ಲಿ ಮನೆಗೆ ತೆರಳುತ್ತಿದ್ದ ಭದ್ರತಾ ಸಿಬ್ಬಂದಿಯೊಬ್ಬನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಆತನನ್ನು ಬೆದರಿಸಿ ನಗದು, ಮೊಬೈಲ್ ಕಳವು ಮಾಡಿರುವ ಘಟನೆ ಇಲ್ಲಿ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಮಹಾಲಕ್ಷ್ಮಿಪುರ ನಿವಾಸಿ ಸುಶಾಂತ್ ಎಂಬುವರು ಭದ್ರತಾ ಸಿಬ್ಬಂದಿಯಾಗಿದ್ದು, ರವಿವಾರ ರಾತ್ರಿ ಕೆಲಸ ಮುಗಿಸಿಕೊಂಡು ಸೈಕಲ್ ನಲ್ಲಿ ಮನೆಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.

ಮಾರಪ್ಪನ ಪಾಳ್ಯದ ಆರ್‌ಸಿ ರಾಯಲ್ ಬಳಿ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಭದ್ರತಾ ಸಿಬ್ಬಂದಿಯನ್ನು ಅಡ್ಡಗಟ್ಟಿ ಸುಶಾಂತ್ ಅವರನ್ನು ಬೆದರಿಸಿ 2 ಸಾವಿರ ರೂ. ನಗದು, ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ. ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News