ಧರ್ಮಸ್ಥಳಕ್ಕೆ ಆಗಮಿಸಿದ ನಿಯೋಜಿತ ಸಿಎಂ ಕುಮಾರಸ್ವಾಮಿ

Update: 2018-05-22 06:10 GMT

ಬೆಳ್ತಂಗಡಿ, ಮೇ 22: ರಾಜ್ಯದ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಬೆಳಗ್ಗೆ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ.

ಇಂದು ಬೆಳಗ್ಗೆ 9:05ರ ಸುಮಾರಿಗೆ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳದ ವಸಂತ ಮಹಲ್ ಹೆಲಿಪ್ಯಾಡಿನಲ್ಲಿ ಬಂದಿಳಿದ ನಿಯೋಜಿತ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಪಕ್ಷದ ಜಿಲ್ಲಾ ನಾಯಕರು, ಕಾರ್ಯಕರ್ತರು ಸ್ವಾಗತಿಸಿದರು. ಈ ವೇಳೆ ದ.ಕ. ಜಿಲ್ಲಾ ಎಸ್ಪಿ ಡಾ.ಬಿ.ಆರ್.ರವೀಕಾಂತೇ ಗೌಡ ಮತ್ತಿತರರು ಹಾಜರಿದ್ದರು.

 ಬಳಿಕ ಅವರು ಅಲ್ಲಿಂದ ಕಾರಿನಲ್ಲಿ ಶ್ರೀ ಕ್ಷೇತ್ರಕ್ಕೆ ಧರ್ಮಸ್ಥಳಕ್ಕೆ ತೆರಳಿದರು. ಅವರನ್ನು ದೇವಳದ ವತಿಯಿಂದ ಮೆರವಣಿಗೆಯ ಮೂಲಕ ಬರಮಾಡಿಕೊಂಡರು.

ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಈ ಭೇಟಿ ನೀಡಿದ್ದು, ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇವಳಕ್ಕೆ ಭೇಟಿ ನೀಡಿ ಅಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಅವರು ಇಲ್ಲಿಂದ ಶೃಂಗೇರಿಗೆ ಪಯಣ ಬೆಳೆಸಲಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News