ದೇವೇಗೌಡ ನಿವಾಸಕ್ಕೆ ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ಭೇಟಿ

Update: 2018-05-22 17:23 GMT

ಬೆಂಗಳೂರು,ಮೇ.22: ಮಾಜಿ‌ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ಇಂದು ಭೇಟಿ ನೀಡಿ ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ದೇವೇಗೌಡರಿಗೆ ಅಭಿನಂದನೆ ಸಲ್ಲಿಸಿದರು.ನಡೆಯುವ

ನಾಳೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಈ ಸಮಾರಂಭಕ್ಕೆ ಕೆ.ಚಂದ್ರಶೇಖರ್ ರಾವ್ ರನ್ನು ಅಹ್ವಾನಿಸಲಾಗಿತ್ತು. ಆದರೆ ನಾಳಿನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಾಗದ ಕಾರಣದಿಂದಾಗಿ ಕೆ.ಚಂದ್ರಶೇಖರ್ ರಾವ್ ಇಂದೇ ಭೇಟಿ ನೀಡಿ ಶುಭ ಕೋರಿದ್ದಾರೆ ಎಮದು ತಿಳಿದು ಬಂದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News