ಮದ್ದೂರು: ಆಸ್ಪತ್ರೆ ಮೇಲೆ ಉರುಳಿದ ಮರ; ವೈದ್ಯಾಧಿಕಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

Update: 2018-05-22 17:49 GMT

ಮದ್ದೂರು, ಮೇ 22: ಪಟ್ಟಣದ ಕೆ.ಗುರುಶಾಂತಪ್ಪ ಸಾರ್ವಜನಿಕ ಆಸ್ಪತ್ರೆಯ ಮುಂಭಾಗದಲ್ಲಿ ಒಣಗಿದ ಅರಳಿ ಮರದ ಕೊಂಬೆಗಳು ಸೋಮವಾರ ರಾತ್ರಿ ಬಿರುಗಾಳಿ ಮಳೆಗೆ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಪಟ್ಟಣದ ಹೃದಯ ಭಾಗದಲ್ಲಿರುವ ಆಸ್ಪತ್ರೆಯ ಮುಂಭಾಗದಲ್ಲಿರುವ ಭಾರಿ ಗಾತ್ರದ ಈ ಅರಳಿ ಮರ ಆಸ್ಪತ್ರೆಯ ಮುಂಭಾಗದಲ್ಲಿರುವ ಮೇಲ್ಛಾವಣಿಗೆ ಬಿದ್ದು ಛಾವಣಿ ಜಖಂಗೊಂಡಿದೆ. ಈಗಲಾದರೂ ಸಂಬಂಧಿಸಿದ ಅಧಿಕಾರಿಗಳು ಎಚ್ಚೆತ್ತುಕೊಂಡು ಕೆಳಗೆ ಬಿದ್ದಿರುವ ಕೊಂಬೆಗಳನ್ನು ತೆರವುಗೊಳಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಮರವು ಹಲವು ತಿಂಗಳಿಂದ ಒಣಗಿ ಮುರಿದು ಆಸ್ಪತ್ರೆಯ ಮೇಲ್ಭಾಗದಲ್ಲಿ ಒರಗಿಕೊಂಡಿತ್ತು. ಆದರೂ ಸಹ ತಾಲೂಕು ವೈದ್ಯಾಧಿಕಾರಿ, ಆರೋಗ್ಯ ಅಧಿಕಾರಿಗಳು ಅರಣ್ಯ ಇಲಾಖೆಗೆ ಪತ್ರ ಬರೆದು ಅದನ್ನು ತೆರವುಗೊಳಿಸುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News