ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಡಾ.ಶಿವಶರಣ್ ಶೆಟ್ಟಿ ನಾಮಪತ್ರ ಸಲ್ಲಿಕೆ

Update: 2018-05-22 19:08 GMT

ಮಂಗಳೂರು,ಮೇ 22 : ಡಾ.ಶಿವಶರಣ್ ಶೆಟ್ಟಿ ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ನಾಮ ಪತ್ರ ಸಲ್ಲಿಸಿದರು.

ಜೂನ್ 8 ರಂದು ವಿಧಾನ ಪರಿಷತ್ ಚುನಾವಣೆ ನಡೆಯಲಿದೆ. ಪಕ್ಷೇತರರಾಗಿ ಸ್ಪರ್ಧಿಸುತ್ತಿರುವ ಡಾ.ಶಿವಶರಣ್ ದಂತ ವ್ಯಧ್ಯರಾಗಿದ್ದು, 'ನಮ್ಮಟಿವಿ' ಟಿವಿ ವಾಹಿನಿಯ ಆಡಳಿತ ನಿರ್ದೇಶಕರಾಗಿದ್ದಾರೆ.

ಪ್ರೇಮ ಕಾಂತಿ ಎಜುಕೇಶನ್ ಟ್ರಸ್ಟ್ ನಿರ್ದೇಶಕರಾಗಿಯೂ ಶಿಕ್ಣಣ ಕ್ಷೇತ್ರದಲ್ಲಿ ಅನುಭವ ಹೊಂದಿದ್ದಾರೆ. ಮೈಸೂರಿನಲ್ಲಿ ಚುನಾವಣಾ ಕಚೇರಿಯಲ್ಲಿ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಗುರುಕಿರಣ್, ಐಡಿಎ ಸಂಘದ ಪಧಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News