ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪರಮೇಶ್ವರ್ ರಾಜೀನಾಮೆ

Update: 2018-05-23 12:52 GMT

ಬೆಂಗಳೂರು, ಮೇ 23: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ಸಂಬಂಧ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿಗೆ ಪತ್ರವನ್ನು ಬರೆದಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಆಗಲಿದೆ. ನನಗಿಂತ ಉತ್ತಮರನ್ನು ಹೈಕಮಾಂಡ್ ಆಯ್ಕೆ ಮಾಡಲಿದೆ. ಉಪಮುಖ್ಯಮಂತ್ರಿಯಾಗುತ್ತಿರುವುದರಿಂದ ಸರಕಾರದಲ್ಲಿ ಸಂಪೂರ್ಣವಾಗಿ ತೊಡಗಬೇಕು. ಎರಡು ಹುದ್ದೆಗಳನ್ನು ಏಕಕಾಲದಲ್ಲಿ ನಿಭಾಯಿಸಲು ಕಷ್ಟವಾಗುತ್ತದೆ ಎಂದರು

ರಾಜ್ಯದ ಇತಿಹಾಸದಲ್ಲೇ ಸುದೀರ್ಘವಾಗಿ ಕೆಪಿಸಿಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿದಕ್ಕಾಗಿ ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇನೆ. ಹೈಕಮಾಂಡ್ ಸೂಚನೆಯಂತೆ ಅಧ್ಯಕ್ಷ ಸ್ಥಾನ ಬಿಟ್ಟು ಕೊಡಲಾಗಿದೆ. ಶೀಘ್ರದಲ್ಲೇ ಹೈಕಮಾಂಡ್ ಹೊಸ ಅಧ್ಯಕ್ಷರನ್ನು ನೇಮಕ ಮಾಡಲಿದೆ ಎಂದು ಪರಮೇಶ್ವರ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News