ಕರ್ಣಾಟಕ ಬ್ಯಾಂಕ್‌ನ ಆಡಳಿತ ನಿರ್ದೇಶಕ ಮಹಾಬಲೇಶ್ವರರಿಗೆ 'ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ 2017'

Update: 2018-05-23 14:49 GMT

ಬೆಂಗಳೂರು, ಮೇ 23: ಕರ್ಣಾಟಕ ಬ್ಯಾಂಕ್‌ನ ಆಡಳಿತ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಮಹಾಬಲೇಶ್ವರ ಎಂ.ಎಸ್. ಅವರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅವರು ಸಲ್ಲಿಸಿದ ಅತ್ಯುತ್ತಮ ಸೇವೆ ಮತ್ತು ಕೊಡುಗೆಗೆ ಪ್ರತಿಷ್ಠಿತ 'ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ 2017' ನೀಡಿ ಪುರಸ್ಕರಿಸಲಾಗಿದೆ.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಬುಧವಾರ ಜರುಗಿದ ಅದ್ಧೂರಿ ಸಮಾರಂಭದಲ್ಲಿ ಅವರು ಈ ಪ್ರಶಸ್ತಿಯನ್ನು ಸ್ವೀಕರಿಸಿದರು.

ಮಹಾಬಲೇಶ್ವರ ಎಂ.ಎಸ್. ಇತ್ತೀಚೆಗಷ್ಟೇ ಯಶಸ್ವಿಯಾಗಿ ಬ್ಯಾಂಕಿನ ಆಡಳಿತ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಒಂದು ವರ್ಷ ಪೂರೈಸಿದ್ದು ಬ್ಯಾಂಕು ಸರ್ವಾಂಗೀಣ ಪ್ರಗತಿಯೊಂದಿಗೆ 1 ಲಕ್ಷ ಕೋಟಿ ರೂ. ದಾಖಲೆಯ ವ್ಯವಹಾರವನ್ನು ಸಾಧಿಸಿದ್ದು, ಬ್ಯಾಂಕಿನ ಬೆಳವಣಿಗೆಯಲ್ಲಿ ಇದೊಂದು ಹೊಸ ಮೈಲುಗಲ್ಲಾಗಿದೆ.

ಪ್ರಶಸ್ತಿ ಸ್ವೀಕರಿಸಿ ಬಳಿಕ ಮಾತನಾಡಿದ ಮಹಾಬಲೇಶ್ವರ ಅವರು ಈ ಪ್ರಶಸ್ತಿಯು ಕರ್ಣಾಟಕ ಬ್ಯಾಂಕ್ ಹಾಗೂ ಬ್ಯಾಂಕಿನ ಎಲ್ಲಾ ಸಿಬ್ಬಂದಿ ವರ್ಗ ಮತ್ತು ಭಾಗೀದಾರರಿಗೆ ಸಂದ ಗೌರವ ಮತ್ತು ಪ್ರಶಸ್ತಿ ನನ್ನ ಜವಾಬ್ದಾರಿಯನ್ನು ಹೆಚ್ಚಿಸುವುದರೊಂದಿಗೆ ಇನ್ನೂ ಹೆಚ್ಚಿನ ಸೇವೆ ನೀಡಲು ಪ್ರೋತ್ಸಾಹ ನೀಡಿದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News