ಸಮುದ್ರದಲ್ಲಿ ವಾಯುಭಾರ ಕುಸಿತ ಕರಾವಳಿಯಲ್ಲಿ ಭಾರೀ ಮಳೆ ಸಂಭವ
Update: 2018-05-23 16:31 GMT
ಮಂಗಳೂರು, ಮೇ 23: ಕರ್ನಾಟಕ ಕರಾವಳಿ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು ಸಹಿತ ರಾಜ್ಯದ ದಕ್ಷಿಣ ಭಾಗದ ಒಳ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಸಮುದ್ರದಲ್ಲಿ ಗಂಟೆಗೆ 55ರಿಂದ 65 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ದೊರೆತಿದೆ.
ಈ ಹಿನ್ನೆಲೆಯಲ್ಲಿ ಮೇ 22ರ ರಾತ್ರಿಯಿಂದ ಸಮುದ್ರ ಪ್ರಕ್ಷುಬ್ಧವಾಗಿರುವುದರಿಂದ ಮೇ 23ರಿಂದ 26ರವರೆಗೆ ಮೀನುಗಾರರು ಎಚ್ಚರಿಕೆ ವಹಿಸಬೇಕೆಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.