ಬೆಂಗಳೂರು: ನೇಣು ಬಿಗಿದು ಯುವಕ ಆತ್ಮಹತ್ಯೆ
Update: 2018-05-23 16:49 GMT
ಬೆಂಗಳೂರು, ಮೇ 23: ಮನೆಯ ಸದಸ್ಯರು ಮದ್ಯ ಸೇವನೆ ಮಾಡುತ್ತಾರೆಂದು ಬೇಸತ್ತ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಇಲ್ಲಿನ ಕೆಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೆಆರ್ ಪುರಂನ ಅಯ್ಯಪ್ಪನಗರದ ಆಂಧ್ರಮೂಲದ ಕದಿರಪ್ಪ(19)ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಪೊಲೀಸರು ತಿಳಿಸಿದ್ದಾರೆ.
ನಗರದ ಸೂರ್ಯ ಲೇಔಟ್ನಲ್ಲಿ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕದಿರಪ್ಪತಂದೆ, ಅಣ್ಣ ಸೇರಿದಂತೆ ಎಲ್ಲರೂ ಮದ್ಯ ಸೇವನೆಯ ಚಟ ಅಂಟಿಸಿಕೊಂಡು ದಿನನಿತ್ಯ ಜಗಳವಾಡುತ್ತಿದ್ದರು. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಕೆಆರ್ ಪುರಂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.