ಮಂಡ್ಯ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಮೃತ್ಯು

Update: 2018-05-23 17:37 GMT

ಮಂಡ್ಯ, ಮೇ 23: ಜಿಲ್ಲೆಯ ಮುತ್ತತ್ತಿ ಗ್ರಾಮದ ಬಳಿ ಹರಿಯುತ್ತಿರುವ ಕಾವೇರಿ ನದಿಯಲ್ಲಿ ಈಜಲು ಹೋಗಿ ಕ್ಯಾಬ್ ಚಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಜರುಗಿದೆ.

ರವಿಕಿರಣ್(27) ಮೃತಪಟ್ಟ ವ್ಯಕ್ತಿ. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಡೂರು ಗ್ರಾಮದ ವಾಸಿ ಅನಂತಪ್ಪ ಎಂಬುವವರ ಪುತ್ರನಾದ ರವಿಕಿರಣ್, ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಮಂಗಳವಾರ ತನ್ನ ಆರು ಜನ ಸ್ನೇಹಿತರೊಡನೆ ಕಾರಿನಲ್ಲಿ ಮುತ್ತತ್ತಿಗೆ ಬಂದು ದೇವರ ದರ್ಶನ ಪಡೆದು ನಂತರ ಕಾವೇರಿ ನದಿಯಲ್ಲಿ ಎಲ್ಲರೂ ಈಜಲು ಹೋದಾಗ ಘಟನೆ ಸಂಭವಿಸಿದೆ.

ಬುಧವಾರ ಬೆಳಗ್ಗೆ ನುರಿತ ಈಜುಗಾರರ ಸಹಾಯದಿಂದ ಶವವನ್ನು ಹೊರ ತೆಗೆದು ಶವಪರೀಕ್ಷೆಯ ನಂತರ ವಾರಸುದಾರರಿಗೆ ಒಪ್ಪಿಸಲಾಯಿತು. ಹಲಗೂರು ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಶ್ರೀಧರ್ ದೂರು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News