ಚಿಕ್ಕಮಗಳೂರು: ಹಲ್ಲೆ ಆರೋಪಿಗೆ ಜೈಲು ಶಿಕ್ಷೆ, ದಂಡ
ಚಿಕ್ಕಮಗಳೂರು, ಮೇ.23: ಮಹಿಳೆ ಮೇಲೆ ಹಲ್ಲೆ ಎಸಗಿದ ಆರೋಪಿಗೆ ನಗರದ 3 ನೇ ಅಧಿಕ ಸಿ.ಜೆ. ಮತ್ತು ಜೆ.ಎಂಎಫ್.ಸಿ ನ್ಯಾಯಾಲಯವು ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
2014 ಸೆಪ್ಟೆಂಬರ್ 3ರಂದು ಮಧ್ಯಾಹ್ನ 3.55 ರ ಸಮಯದಲ್ಲಿ ಸಖರಾಯಪಟ್ಟಣ ಹೋಬಳಿಯ ಕೆಂಗೇನಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಭಾಗ್ಯಲಕ್ಷ್ಮಿ ಎಂಬ ಮಹಿಳೆಯ ಮೇಲೆ ಆರೋಪಿ ವಿಶ್ವನಾಥ ಎಂಬುವವನು ಅವಾಚ್ಯ ಶಬ್ದಗಳಿಂದ ಬೈದು ಕಲ್ಲಿನಿಂದ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಸಖರಾಯಪಟ್ಟಣ ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ವಿಚಾರಣೆ ನಡೆಸಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 3ನೇ ಅಧಿಕ ಸಿ.ಜೆ. ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶರಾದ ಕುಮಾರಿ ದೀಪಾ ಕೆ.ಆರ್ ಅವರು ಆರೋಪಿ ವಿಶ್ವನಾಥನಿಗೆ ಅಪರಾಧಕ್ಕೆ 4 ತಿಂಗಳು ಸಾದಾ ಜೈಲು ಶಿಕ್ಷೆ ಹಾಗೂ ರೂ. 1000/- ದಂಡ ವಿಧಿಸಿ ತೀರ್ಪು ನೀಡಿರುತ್ತಾರೆ.
ಸರಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ರಾಘವೇಂದ್ರ ರಾಯ್ಕರ್.ವಿ ಇವರು ವಾದ ಮಂಡಿಸಿದ್ದರು