ಆರ್.ಆರ್ ನಗರ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ನನಗೆ ಬೆಂಬಲ ನೀಡಿ: ಹುಚ್ಚ ವೆಂಕಟ್

Update: 2018-05-24 14:47 GMT

ಬೆಂಗಳೂರು, ಮೇ 24: ವಿಧಾನಸಭಾ ಚುನಾವಣೆಯಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ನನ್ನನ್ನು ಕ್ಷೇತ್ರದ ಮತದಾರರು ಬೆಂಬಲಿಸಬೇಕೆಂದು ಪಕ್ಷೇತರ ಅಭ್ಯರ್ಥಿ ವೆಂಕಟ್ (ಹುಚ್ಚ ವೆಂಕಟ್) ಮನವಿ ಮಾಡಿದ್ದಾರೆ.

ಗುರುವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಮತಕ್ಕಾಗಿ ಹಣ, ಹೆಂಡ, ಕುಕ್ಕರ್, ಸೀರೆ ನೀಡುವುದಿಲ್ಲ. ಬದಲಾಗಿ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಪಟ್ಟು ಕೆಲಸ ಮಾಡುತ್ತೇನೆ. ನನ್ನ ಮೇಲೆ ನಂಬಿಕೆ ಇಟ್ಟು, ನನಗೆ ಮತ ನೀಡಿ ಎಂದು ಅವರು ಕೇಳಿಕೊಂಡರು.

ಚುನಾವಣೆ ಸಮೀಪಿಸುತ್ತಿದೆ. ಆದರೆ, ನಾನು ಮನೆ-ಮನೆಗೆ ತೆರಳಿ ಪ್ರಚಾರ ನಡೆಸುವುದಿಲ್ಲ. ಕ್ಷೇತ್ರದಾದ್ಯಂತ ಸಂಚರಿಸಿ ಸಮಸ್ಯೆಗಳನ್ನು ತಿಳಿದುಕೊಂಡಿದ್ದೇನೆ. ಸಮಸ್ಯೆಗಳ ಪರಿಹಾರ ನನ್ನ ಮೂಲ ಉದ್ದೇಶ. ಹೀಗಾಗಿ, ಕ್ಷೇತ್ರದ ಜನತೆ ನನ್ನನ್ನು ಶಾಸಕನಾಗಿ ಆಯ್ಕೆ ಮಾಡಿ ಜನಸೇವೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಈಗಾಗಲೇ ನಾನು ಸಮಾಜ ಸೇವೆಯಲ್ಲಿ ನಿರತನಾಗಿದ್ದು, ಇದರೊಂದಿಗೆ ಅಧಿಕಾರವೂ ದೊರೆತರೆ ಹೆಚ್ಚು ಸಮಾಜ ಸೇವೆಗೆ ಸಹಕಾರಿಯಾಗಲಿದೆ ಎನ್ನುವ ಉದ್ದೇಶದಿಂದ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ ಎಂದ ಅವರು, ಒಂದು ವೇಳೆ ಚುನಾವಣೆಯಲ್ಲಿ ಸೋತರು ಸಹ ಸಮಾಜ ಸೇವೆಯನ್ನು ಮುಂದುವರೆಸುತ್ತೇನೆ ಎಂದು ಅವರು ಭರವಸೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News