ರಜನಿಕಾಂತ್ ಚಿತ್ರ ಪ್ರದರ್ಶನಕ್ಕೆ ಕರ್ನಾಟಕ ರಣಧೀರ ಪಡೆ ವಿರೋಧ

Update: 2018-05-26 13:01 GMT

ಬೆಂಗಳೂರು, ಮೇ 26: ತಮಿಳು ನಟ ರಜನಿಕಾಂತ್ ನಟಿಸಿರುವ ‘ಕಾಲ’ ಚಿತ್ರವನ್ನು ರಾಜ್ಯದಲ್ಲಿ ಬಿಡುಗಡೆಗೆ ಅವಕಾಶ ನೀಡಬಾರದು ಎಂದು ಕರ್ನಾಟಕ ರಣಧೀರ ಪಡೆ ಆಗ್ರಹಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಡೆಯ ಅಧ್ಯಕ್ಷ ಹರೀಶ್ ಕುಮಾರ್, ಕಾವೇರಿ ನದಿ ನೀರು ಹಂಚಿಕೆ ಸಂಬಂಧ ನಿರ್ವಹಣಾ ಮಂಡಳಿ ರಚನೆ ಮಾಡಬೇಕು ಎಂದು ರಜನಿಕಾಂತ್ ಮನವಿ ಮಾಡಿದ್ದಾರೆ. ಅವರ ಮನವಿ ನ್ಯಾಯಸಮ್ಮತವಾದುದಲ್ಲ. ಆದುದರಿಂದಾಗಿ, ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು.

ಜೂ.7 ರಂದು ಎಲ್ಲ ಸ್ಥಳಗಳಲ್ಲಿ ಏಕಕಾಲದಲ್ಲಿ ಚಿತ್ರ ಬಿಡುಗಡೆ ಮಾಡಲು ಮುಂದಾಗಿದ್ದು, ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ಯಾವುದೇ ಕಾರಣಕ್ಕೂ ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದು. ಒಂದು ವೇಳೆ ಅವಕಾಶ ನೀಡಿದರೆ ಉಗ್ರ ಪ್ರತಿಭಟನೆ ಮಾಡಲಾಗುತ್ತದೆ. ಚಿತ್ರ ಮಂದಿರಗಳನ್ನು ಧ್ವಂಸ ಮಾಡಲಾಗುತ್ತದೆ. ಅದಕ್ಕೆ ಮಂಡಳಿ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಕರುನಾಡ ಸೇವಕರ ಸಂಘದ ರೂಪೇಶ್ ರಾಜಣ್ಣ, ರಣಧೀರ ಪಡೆಯ ಖಜಾಂಚಿ ರಮಾನಂದ ಅಂಕೋಲ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News