×
Ad

​ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ: ಸವಾರ ಮೃತ್ಯು

Update: 2018-05-27 21:57 IST

ಬ್ರಹ್ಮಾವರ, ಮೇ 27: ಬೈಕ್ ಹತೋಟಿ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಮೇ 26ರಂದು ರಾತ್ರಿ 11.50ರ ಸುಮಾರಿಗೆ ಕೊಳಲಗಿರಿ ಮಾರಿಯಮ್ಮ ದೇವಸ್ಥಾನದ ಬಳಿ ತಿರುವು ರಸ್ತೆಯಲ್ಲಿ ನಡೆದಿದೆ.

ಮೃತರನ್ನು ಕೀರ್ತಿ ಕುಮಾರ್(23) ಎಂದು ಗುರುತಿಸಲಾಗಿದೆ. ಸಹ ಸವಾರ ಹೊನ್ನಾವರ ತಾಲೂಕಿನ ಮಂಕಿ ಗ್ರಾಮದ ರಂಜೀತ್ ಪಿ.ಅಂಬಿಗ(21) ಗಾಯ ಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರಿಬ್ಬರು ಬೈಕಿನಲ್ಲಿ ತಮ್ಮ ಸಹೋದ್ಯೋಗಿಯ ಮೆಹಂದಿ ಕಾರ್ಯಕ್ರಮಕ್ಕೆ ಹೇರಂಜೆಗೆ ಹೋಗಿದ್ದು, ಅಲ್ಲಿಂದ ವಾಪಾಸ್ಸು ಕೊಳಲಗಿರಿ -ಸಂತೆಕಟ್ಟೆ ರಸ್ತೆಯಲ್ಲಿ ಬರುತ್ತಿದ್ದಾಗ ಬೈಕ್ ಹತೋಟಿ ತಪ್ಪಿವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರ ಪರಿಣಾಮ ಇವರಿಬ್ಬರು ಅಲ್ಲೇ ಸಮೀಪದ ಗದ್ದೆಗೆ ಬಿದ್ದು ತೀವ್ರ ಗಾಯಗೊಂಡಿದ್ದರು. ಇವರಲ್ಲಿ ಕೀರ್ತಿ ಕುಮಾರ್ ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News