ಬಿಜೆಪಿ ಬಂದ್ ತಿರಸ್ಕರಿಸಿದ ಜನತೆ: ಕೆಪಿಸಿಸಿ ಕಾರ್ಯದರ್ಶಿ ಡಿ. ಬಸವರಾಜ್

Update: 2018-05-28 17:05 GMT

ದಾವಣಗೆರೆ,ಮೇ.28: ನೂತನ ಸರ್ಕಾರಕ್ಕೆ ಮುಜುಗರವನ್ನುಂಟು ಮಾಡುವ ದುರುದ್ದೇಶದಿಂದ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿಗರು ಸಾಲ ಮನ್ನಾ ವಿಚಾರದಲ್ಲಿ ನೀಡಿದ್ದ ಕರ್ನಾಟಕ ಬಂದ್‍ಗೆ ರಾಜ್ಯದ ಜನತೆ ಕಿಂಚಿತ್ತೂ ಬೆಲೆ ನೀಡದೇ ಸಾರಾಸಗಟಾಗಿ ತಿರಸ್ಕರಿಸುವ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯದರ್ಶಿ ಡಿ. ಬಸವರಾಜ್ ವ್ಯಂಗವಾಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಬಿಜೆಪಿ ನಾಟಕ ಕಂಡಿರುವ ರಾಜ್ಯದ ಜನತೆ ಹೊಸ ನಾಟಕಕ್ಕೆ ಮನ್ನಣೆ ನೀಡಿಲ್ಲ. ಸಮ್ಮಿಶ್ರ ಸರ್ಕಾರ ಆಡಳಿತಕ್ಕೆ ಬಂದು ಮೂರ್ನಾಲ್ಕು ದಿನವಾಗಿದ್ದು, ಮುಖ್ಯಮಂತ್ರಿಗಳು ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದರೂ ಬಿಜೆಪಿಯವರು ಬಂದ್ ಹೆಸರಿನಲ್ಲಿ ಜನರನ್ನು ಸಂಕಷ್ಟಕ್ಕೆ ದೂಡುವ ಹಾಗೂ ಸರ್ಕಾರದ ವಿರುದ್ಧ ರೈತರನ್ನು ಎತ್ತಿ ಕಟ್ಟುವ ಕುತಂತ್ರದ ಕಾರ್ಯ ಮಾಡಲು ಯತ್ನಿಸುತ್ತಿದ್ದಾರೆ. ಆದರೆ, ಇಂದು ನೀಡಿದ ಬಂದ್‍ಗೆ ಯಾವೊಬ್ಬ ಸಾರ್ವಜನಿಕರೂ ಸ್ಪಂದಿಸಿಲ್ಲ. ಆದರೆ, ಬಿಜೆಪಿ ಕಾರ್ಯಕರ್ತರು ದಬ್ಬಾಳಿಕೆ, ದೌರ್ಜನ್ಯದ ಮೂಲಕ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿಸಿರುವುದು ಹೇಯ ಕೃತ್ಯವಾಗಿದೆ ಎಂದು ಅವರು ಖಂಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News