ಕಡೂರಿನಲ್ಲಿ ಸೇತುವೆಯಿಂದ ಬಸ್ ಉರುಳಿ 20ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

Update: 2018-05-29 13:52 GMT

ಚಿಕ್ಕಮಗಳೂರು, ಮೇ 29: ರಾಷ್ಟ್ರೀಯ ಹೆದ್ದಾರಿ 206ರಲ್ಲಿ  ಕಡೂರಿನ  ವೇದಾ ನದಿಯ ಸೇತುವೆಯಿಂದ ಮಂಗಳವಾರ  ಮಧ್ಯಾಹ್ನ  ಕೆಎಸ್ ಆರ್ ಟಿಸಿ ಬಸ್ ಸುಮಾರು 30 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮವಾಗಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಬೆಂಗಳೂರಿನಿಂದ ಕುಂದಾಪುರಕ್ಕೆ ಬರುತ್ತಿದ್ದ ಬಸ್  ತಂಗಲಿ ಸಮೀಪ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ವೇದಾ ನದಿ ಸೇತುವೆಗೆ ಡಿಕ್ಕಿ ಹೊಡೆದು ನದಿಗೆ ಬಿದ್ದಿದೆ. ಸೇತುವೆಯಿಂದ ಉರುಳಿ ಬಿದ್ದಿದ್ದು,  ಗಾಯಗೊಂಡ ಪ್ರಯಾಣಿಕರ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಗಾಯಗೊಂಡವರನ್ನು ಸ್ಥಳೀಯ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.ಗಾಯಾಳುಗಳಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು, ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.   

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News