ಶೃಂಗೇರಿ ಕ್ಷೇತ್ರ ಶಾಸಕ ಟಿ.ಡಿ.ರಾಜೇಗೌಡ ಅಸ್ವಸ್ಥ; ಆಸ್ಪತ್ರೆಗೆ ದಾಖಲು

Update: 2018-05-31 12:06 GMT

ಚಿಕ್ಕಮಗಳೂರು, ಮೇ 31: ಶೃಂಗೇರಿ ತಾಲೂಕಿನ ನೂತನ ಶಾಸಕ ಟಿ.ಡಿ.ರಾಜೇಗೌಡ ಫುಡ್ ಪಾಯಿಸನ್‍ನಿಂದ ನಗರದ ಆಶ್ರಯ ಆಸ್ಪತ್ರೆಯಲ್ಲಿ ಕಳೆದ ಎರಡು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆದ್ದಿರುವ ಏಕೈಕ ಶಾಸಕ ಟಿ.ಡಿ. ರಾಜೇಗೌಡರವರು ಕಳೆದ ಕೆಲ ದಿನಗಳಿಂದ ಕ್ಷೇತ್ರದ ಜನತೆಗೆ ಅಭಿನಂದನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜೊತೆಗೆ ರಾಜ್ಯದಲ್ಲಿ ಸರ್ಕಾರ ರಚನೆ ಸಂದರ್ಭದಲ್ಲಿ ರೆಸಾರ್ಟ್‍ನಲ್ಲಿ ಅನೇಕ ದಿನಗಳು ತಂಗಿದ್ದ ಕಾರಣ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ತಿಳಿದು ಬಂದಿದೆ. 

ಶಾಸಕ ಟಿ.ಡಿ.ರಾಜೇಗೌಡ ಆರೋಗ್ಯದಲ್ಲಿ ಸದ್ಯ ಸುಧಾರಣೆ ಕಂಡು ಬಂದಿದ್ದು, ಗುರುವಾರ ಅಥವಾ ಶುಕ್ರವಾರ ಡಿಸ್ಟಾರ್ಜ್ ಆಗಲಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News