ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾಗಿ ಮಾಜಿ ಸಚಿವ ಲಕ್ಷ್ಮಣ ಸವದಿ ನೇಮಕ

Update: 2018-06-01 12:30 GMT

ಬೆಂಗಳೂರು, ಜೂ. 1: ಬಿಜೆಪಿಯ ರೈತ ಮೋರ್ಚಾ ಅಧ್ಯಕ್ಷರಾಗಿ ಮಾಜಿ ಸಚಿವ ಲಕ್ಷ್ಮಣ ಸವದಿ ಅವರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಸದಾನಂದಗೌಡರ ಸಚಿವ ಸಂಪುಟದಲ್ಲಿ ಸಹಕಾರ ಸಚಿವರಾಗಿದ್ದ ಸವದಿ, ಬೆಳಗಾವಿ ಜಿಲ್ಲೆಯ ಪ್ರಭಾವಿ ನಾಯಕರಾಗಿದ್ದಾರೆ. ಅಥಣಿ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸವದಿ 2018ರ ಚುನಾವಣೆಯಲ್ಲಿ ಅತ್ಯಂತ ಕಡಿಮೆ ಅಂತರದಲ್ಲಿ ಪರಾಭವಗೊಂಡಿದ್ದಾರೆ ಎಂದು ತಿಳಿಸಲಾಗಿದೆ.

ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸದೃಢಗೊಳಿಸುತ್ತಾ, ಮುಂಬರುವ ಎಲ್ಲ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಶ್ರಮಿಸಬೇಕೆಂದು ಯಡಿಯೂರಪ್ಪ, ಲಕ್ಷ್ಮಣ್ ಸವದಿಯವರಿಗೆ ಪ್ರಕಟಣೆಯಲ್ಲಿ ಸೂಚನೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News