ಸಭೆಗಳಲ್ಲಿ ಮೊಬೈಲ್ ಬಳಕೆ ನಿಷೇಧ: ಮುಖ್ಯಮಂತ್ರಿ ಕುಮಾರಸ್ವಾಮಿ

Update: 2018-06-01 15:53 GMT

ಬೆಂಗಳೂರು, ಜೂ. 1: ಸಭೆಗಳಲ್ಲಿ ಪಾಲ್ಗೊಳ್ಳುವ ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ಮೊಬೈಲ್ ಫೋನ್‌ಗಳನ್ನು ಸಭೆಗೆ ತರಬಾರದು. ಒಂದು ವೇಳೆ ತಂದಿರುವವರು ಸಭೆಯ ಸಮನ್ವಯಾಧಿಕಾರಿಗಳಿಗೆ ಒಪ್ಪಿಸಬೇಕೆಂದು ಮುಖ್ಯಮಂತ್ರಿ ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಸಭೆಗಳಲ್ಲಿ ಮೊಬೈಲ್ ಬಳಕೆಯಿಂದ ಚರ್ಚೆಯಾಗುವ ವಿಷಯಗಳ ಮೇಲಿನ ಪ್ರಾಮುಖ್ಯತೆ ಕಡಿಮೆಯಾಗಲಿದೆ. ವಿಷಯಾಂತರ ಆಗುವುದರಿಂದ ಪ್ರತಿಕೂಲ ಪರಿಸ್ಥಿತಿ ಉಂಟಾಗಲಿದೆ ಎಂದು ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

ಪ್ರಮುಖವಾದ ವಿಷಯಗಳ ಬಗ್ಗೆ ಏಕಮುಖವಾಗಿ ಚರ್ಚಿಸಿ ಉತ್ತಮ ನಿರ್ಣಯಗಳನ್ನು ತೆಗೆದುಕೊಳ್ಳಲು ಅನುವಾಗಲಿದೆ. ಸಂಬಂಧಪಟ್ಟವರೆಲ್ಲರೂ ಇದರ ಹಿಂದಿನ ಉದ್ದೇಶವನ್ನು ಅರ್ಥ ಮಾಡಿಕೊಳ್ಳಬೇಕೆಂದು ಕುಮಾರಸ್ವಾಮಿ ಆದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News