ಸುರತ್ಕಲ್: ಗೋಣಿಚೀಲದಲ್ಲಿ ಮೃತದೇಹ ಪತ್ತೆ; ಕೊಲೆ ಶಂಕೆ

Update: 2018-06-02 06:35 GMT

ಸುರತ್ಕಲ್, ಜೂ. 2: ಸುರತ್ಕಲ್ ಸಮೀಪದ ಚೊಕ್ಕಬೆಟ್ಟುನಲ್ಲಿರುವ ಮೋರಿಯ ಕೆಳಗೆ ಮೃತದೇಹವೊಂದು ಶನಿವಾರ ಬೆಳಗ್ಗೆ 10:30ರ ಸುಮಾರಿಗೆ ಪತ್ತೆಯಾಗಿದೆ.

ಮೃತರನ್ನು ಕೊಪ್ಪಲದ ಕಬ್ಬರಗಿ ನಿವಾಸಿ ಮರಿಯಪ್ಪ (55) ಎಂದು ಗುರುತಿಸಲಾಗಿದೆ. ದೇಹವನ್ನು ಎರಡು ತುಂಡು ಮಾಡಿ ಗೋಣಿ ಚೀಲದಲ್ಲಿ ತುಂಬಿಸಿಡಲಾಗಿದೆ. 

ಕೊಲೆ ಮಾಡಿ, ಮೃತದೇಹವನ್ನು ಗೋಣಿಚೀಲದಲ್ಲಿ ತುಂಬಿಸಿ ಮೋರಿಯ ಕೆಳಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಮಾಹಿತಿ ಅರಿತ ಸುರತ್ಕಲ್ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದು, ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News