ಆರ್‌ಟಿಇ ಲೋಪ ಸರಿಪಡಿಸಲು ಕ್ರಮ: ಮುಖ್ಯಮಂತ್ರಿ

Update: 2018-06-02 14:35 GMT

ಬೆಂಗಳೂರು, ಜೂ. 2: ಶಿಕ್ಷಣ ಹಕ್ಕು ಕಾಯ್ದೆ(ಆರ್‌ಟಿಇ)ಯಡಿ ಕೆಲ ಖಾಸಗಿ ಶಾಲೆಗಳು ಬಡ ಮಕ್ಕಳಿಗೆ ಸೀಟು ಕೊಡುತ್ತಿಲ್ಲ ಎಂಬ ಬಗ್ಗೆ ದೂರುಗಳು ಬಂದಿದ್ದು, ಈ ಲೋಪವನ್ನು ಸರಿಪಡಿಸಲು ರಾಜ್ಯ ಸರಕಾರ ಕೂಡಲೇ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಶನಿವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು, ಆರ್‌ಟಿಇ ಲೋಪಗಳ ಬಗ್ಗೆ ಈಗಾಗಲೇ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದು, ಖಾಸಗಿ ಶಾಲೆಗಳು ಬಡ ಮಕ್ಕಳಿಗೆ ಆರ್‌ಟಿಇ ಅಡಿಯಲ್ಲಿ ಸೀಟು ನೀಡುವ ಸಂಬಂಧ ಕೆಲ ಮಾರ್ಪಾಡುಗಳನ್ನು ಮಾಡಲಾಗುವುದು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News