ರೈತ ಮುಷ್ಕರ...
Update: 2018-06-02 18:18 GMT
ದೇಶಾದ್ಯಂತ ರೈತರು ನಡೆಸುತ್ತಿರುವ 10 ದಿನಗಳ ಮುಷ್ಕರ ಶನಿವಾರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಮಹಾರಾಷ್ಟ್ರ, ಪಂಜಾಬ್ ಮತ್ತಿತರೆಡೆಗಳಲ್ಲಿ ಪ್ರತಿಭಟನೆಯ ಬಿಸಿ ತೀವ್ರವಾಗಿ ತಟ್ಟಿದೆ. ಮಹಾರಾಷ್ಟ್ರದ ಹೆದ್ದಾರಿಗಳಲ್ಲಿ ಶನಿವಾರ ರೈತ ಸಂಘಟನೆಗಳು ರಸ್ತೆ ತಡೆ ನಡೆಸಿದ್ದು, ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ರೈತ ಮುಷ್ಕರದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ತರಕಾರಿ ಹಾಗೂ ಹಾಲುಪೂರೈಕೆಯಲ್ಲಿ ಭಾರೀ ವ್ಯತ್ಯಯವುಂಟಾಗಿದೆ. ರೈತ ಸಂಘಟನೆಯಾದ ರಾಷ್ಟ್ರೀಯ ಕಿಸಾನ್ ಮಹಾಸಂಘ(ಆರ್.ಕೆ.ಎಂ.)ವು ರೈತ ಮುಷ್ಕರಕ್ಕೆ ಕರೆ ನೀಡಿತ್ತು.