ಪೊಲೀಸ್ ಪೇದೆ ಸಾವಿಗೆ ಸಿಎಂ ಸಂತಾಪ

Update: 2018-06-03 11:50 GMT

ಬೆಂಗಳೂರು, ಜೂ. 3: ಇಲ್ಲಿನ ವಯ್ಯಲಿಕಾವಲ್ ಪೊಲೀಸ್ ಠಾಣೆಯ ಮುಖ್ಯ ಪೇದೆ ವಿ.ದಯಾನಂದ ಅವರ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಶನಿವಾರ ಬೆಂಗಳೂರಿನ ಹೆಬ್ಬಾಳ ಮೇಲುಸೇತುವೆ ಬಳಿ ರಾತ್ರಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭ ಮೃತಪಟ್ಟಿದ್ದು, ಕೂಡಲೇ ಅವರ ಸಾವಿನ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಕುಮಾರಸ್ವಾಮಿ ಸೂಚಿಸಿದ್ದಾರೆ. ಅಲ್ಲದೆ, ಹೆಡ್ ಕಾನ್ಸ್‌ಸ್ಟೇಬಲ್ ದಯಾನಂದ ಅವರ ಕುಟುಂಬಕ್ಕೆ ಸಾಂತ್ವನ ಹೇಳಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ಅಗತ್ಯ ಪರಿಹಾರ ನೀಡಲು ಆದೇಶ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News