ಬಿಜೆಪಿ ಕಾರ್ಯಕರ್ತನದ್ದು ಹತ್ಯೆಯಲ್ಲ, ಆತ್ಮಹತ್ಯೆ: ಮರಣೋತ್ತರ ಪರೀಕ್ಷೆಯ ವರದಿ

Update: 2018-06-03 15:18 GMT

ಕೋಲ್ಕತ್ತಾ, ಜೂ. 3: ಪಶ್ಚಿಮಂಗಾಳದ ಪುರುಲಿಯಾ ಜಿಲ್ಲೆಯ ಬಲರಾಮಪುರದಲ್ಲಿ ಶನಿವಾರ ಬಿಜೆಪಿ ಕಾರ್ಯಕರ್ತನೋರ್ವನ ಮೃತದೇಹ ನೇಣು ಬಿಗಿದುಕೊಡು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮರಣೋತ್ತರ ಪರೀಕ್ಷೆ ವರದಿ ಹೇಳಿದೆ. ನಾವು ಮರಣೋತ್ತರ ಪರೀಕ್ಷೆಯ ವರದಿ ಪಡೆದುಕೊಂಡಿದ್ದೇವೆ. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪುರುಲಿಯಾ ಪೊಲೀಸ್ ವರಿಷ್ಠ ಆಕಾಶ್ ಮಘರಿಯಾ ತಿಳಿಸಿದ್ದಾರೆ.

ಬಿಜೆಪಿಯ ಇಬ್ಬರು ಕಾರ್ಯಕರ್ತರಾಗಿದ್ದ ದುಲಾಲ್ ಕುಮಾರ್ ಹಾಗೂ ತ್ರಿಲೋಚನ್ ಮಹತೋ ಅವರ ಸಾವು ಕೆಲವೇ ದಿನಗಳಲ್ಲಿ ಸಂಭವಿಸಿದ ಹಿನ್ನೆಲೆಯಲ್ಲಿ ಪೊಲೀಸ್ ಅಧೀಕ್ಷಕ ಜೋಯ್ ಬಿಸ್ವಾಸ್ ಅವರನ್ನು ಸರಕಾರ ವರ್ಗಾಯಿಸಿತ್ತು. ಬಳಿಕ ಆಕಾಶ್ ಮಘರಿಯಾ ಅವರನ್ನು ನೂತನ ಪೊಲೀಸ್ ಅಧೀಕ್ಷಕರನ್ನಾಗಿ ನಿಯೋಜಿಸಿತ್ತು. ಬಿಜೆಪಿ ಕಾರ್ಯಕರ್ತರ ಸಾವಿಗೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಕಾರಣ ಎಂದು ಆರೋಪಿಸಿದ್ದ ಬಿಜೆಪಿ ಸಿಬಿಐ ತನಿಖೆಗೆ ಆಗ್ರಹಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News