ನೇಣು ಹಾಕಿಕೊಂಡು ವ್ಯಕ್ತಿ ಆತ್ಮಹತ್ಯೆ : ಅನುಮಾನಾಸ್ಪದ ಸಾವು ಪ್ರಕರಣ ದಾಖಲು

Update: 2018-06-04 14:19 GMT

ಬಾಗೇಪಲ್ಲಿ,ಜೂ.4: ವಿವಾಹಿತ ವ್ಯಕ್ತಿಯೊಬ್ಬನು ಮರಕ್ಕೆ ನೇಣು ಹಾಕಿಕೊಂಡು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಪಾತಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಬೈರಪ್ಪಲ್ಲಿ ಗ್ರಾಮದ ಬಳಿ ನಡೆದಿದೆ.

ಮೃತ ವ್ಯಕ್ತಿಯನ್ನು ಬೈರಪ್ಪಲ್ಲಿ ಗ್ರಾಮದ ಶಿವಪ್ಪ(35) ಎಂದು ಗುರುತಿಸಲಾಗಿದ್ದು ಗ್ರಾಮದ ಸಮೀಪದಲ್ಲಿ ಇಂದು ಬೆಳಗ್ಗೆ ಮರಕ್ಕೆ ನೇಣುಹಾಕಿಕೊಂಡು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ ನೆಲದ ಮೇಲೆ ಕಾಲುಗಳನ್ನು ಮಡಚಿ ಕುಳಿತುಕೊಂಡಿರುವ ಸ್ಥಿತಿಯಲ್ಲಿ ಕಂಡು ಬಂದಿರುವುದು ಸಾವಿನ ಬಗ್ಗೆ ಹಲವು ಅನುಮಾನಗಳನ್ನು ಹುಟ್ಟಿಸುತ್ತಿದೆ.

ಮೃತ ವ್ಯಕ್ತಿ ವಿವಾಹಿತನಾಗಿದ್ದು, ಸಾವಿಗೆ ಕಾರಣ ಸ್ಪಷ್ಠವಾಗಿ ತಿಳಿದುಬಂದಿಲ್ಲವಾದರೂ ನೇಣು ಹಾಕಿಕೊಂಡಿರುವ ವ್ಯಕ್ತಿ ಪತ್ತೆಯಾಗಿರುವ ಸ್ಥಿತಿ ಕಂಡು ಇದೊಂದು ಕೊಲೆಯಾಗಿರಬಹುದು ಎಂಬ ಅನುಮಾನವನ್ನು ವ್ಯಕ್ತಪಡಿಸುತ್ತಿದ್ದಾರೆ. ಪಾತಪಾಳ್ಯ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಅನುಮಾನಾಸ್ಪದ ಸಾವು ಪ್ರಕರಣವಾಗಿದ್ದರಿಂದ ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಫೋರೆನ್ಸಿಕ್ ತಜ್ಞವೈದ್ಯರು ಚಿಕ್ಕಬಳ್ಳಾಪುರದಿಂದ ಬಂದು ಮರಣೋತ್ತರ ಪರೀಕ್ಷೆ ಮಾಡಬೇಕಾಗಿರುವುದರಿಂದ ಮೃತದೇಹವನ್ನು ಬಾಗೇಪಲ್ಲಿ ಶವಾಗಾರದಲ್ಲಿ ಇರಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News