ಯುವತಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಯುವಕನಿಗೆ ಥಳಿಸಿದ ಸಾರ್ವಜನಿಕರು

Update: 2018-06-04 14:36 GMT

ಜಗಳೂರು,ಜೂ.4: ಯುವತಿಯೊಬ್ಬಳಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ ಯುವಕನೊಬ್ಬನಿಗೆ ಸಾರ್ವಜನಿಕರು ಧರ್ಮಧೇಟು ನೀಡಿದ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ಘಟನೆ ಜಗಳೂರಿನಲ್ಲಿ ನಡೆದಿದ್ದು, ಇಲ್ಲಿನ ನವ್ಯ ಜ್ಞಾನ ಜ್ಯೋತಿ ಸಂಸ್ಥೆಯ ಯುವತಿಯೊಬ್ಬರಿಗೆ ಹಲವು ದಿನಗಳಿಂದ ಯುವಕನೊಬ್ಬ ವಾಟ್ಸಾಪ್, ಫೇಸ್‍ಬುಕ್‍ನಲ್ಲಿ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ. ಇದರಿಂದ ಯುವತಿ ಬೇಸತ್ತಿದ್ದಳು.

ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದ ಯುವಕ ತಾಲೂಕಿನ ಕಲ್ಲೇದೇವಪುರ ಗ್ರಾಮದ ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಈತ ಪ್ರತಿನಿತ್ಯ ಯುವತಿಗೆ ಬೇರೆಯವರ ಜೊತೆ ಅನೈತಿಕ ಸಂಬಂಧ ಕಲ್ಪಿಸಿ ವಾಟ್ಸಾಪ್, ಫೇಸ್‍ಬುಕ್‍ನಲ್ಲಿ ಮೇಸೆಜ್ ರವಾನಿಸುತ್ತಿದ್ದ ಎನ್ನಲಾಗಿದೆ.  ಇದರಿಂದ ಮನನೊಂದ ಯುವತಿ ಜಗಳೂರಿಗೆ ಬಂದು ಯುವಕನನ್ನು ಹೊಟೇಲ್‍ಗೆ ಕರೆಯಿಸಿದಾಗ ಯುವತಿ ಸಂಬಂಧಿಕರು ಧರ್ಮದೇಟು ನೀಡಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಧ್ಯ ಈತನನ್ನು ಜಗಳೂರು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News