ಕೊಯಿನಾಡು : ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

Update: 2018-06-04 15:37 GMT

ಮಡಿಕೇರಿ, ಜೂ.4 :ಕೆಎಸ್ಸಾರ್ಟಿಸಿ ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದ ಘಟನೆ ಸಂಪಾಜೆ ಸಮೀಪದ ಕೊಯಿನಾಡು ರಸ್ತೆಯಲ್ಲಿ ನಡೆದಿದೆ. 

ಸುಬ್ರಹ್ಮಣ್ಯದಿಂದ ಮಡಿಕೇರಿ ಮಾರ್ಗವಾಗಿ ಬೆಂಗಳೂರಿಗೆ ಸೋಮವಾರ ಬೆಳಗ್ಗೆ ಬಸ್ ತೆರಳುತ್ತಿತ್ತು. ಕೊಡಗು ಜಿಲ್ಲೆಯ ಗಡಿಗ್ರಾಮ ಸಂಪಾಜೆ ಸಮೀಪದ ಕೊಯಿನಾಡು ಬಳಿ ಅಡ್ಡಾದಿಡ್ಡಿಯಾಗಿ ಬಂದ ಟ್ಯಾಂಕರೊಂದು, ಬಸ್ಸಿಗೆ ಢಿಕ್ಕಿ ಹೊಡೆಯುವ ಸಾಧ್ಯತೆಯಿತ್ತು. ಕೆಎಸ್ಸಾರ್ಟಿಸಿ ಚಾಲಕ ಬಸ್ಸನ್ನು ತಕ್ಷಣ ರಸ್ತೆ ಬದಿಗೆ ಚಲಾಯಿಸಿದ ಪರಿಣಾಮ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ನಿಂತಿದೆ.

ಬಸ್ ಹಾಗೂ ಟ್ಯಾಂಕರ್ ನಡುವೆ ಮುಖಾಮುಖಿ ಸಂಭವಿಸಿದ್ದರೆ ಪ್ರಾಣಾಪಾಯವಾಗುವ ಸಾಧ್ಯತೆಯಿತ್ತು. 30ರಿಂದ 35 ಮಂದಿ ಬಸ್ಸಿನಲ್ಲಿದ್ದರು. ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೆಎಸ್ಸಾರ್ಟಿಸಿ ಚಾಲಕನ ಸಮಯ ಪ್ರಜ್ಞೆ ಬಗ್ಗೆ ಪ್ರಯಾಣಿಕರು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News