ಎಸ್.ಆರ್.ಪಾಟೀಲ್ ಜತೆಗೆ ಚರ್ಚಿಸಿ ಸಮಾಧಾನಪಡಿಸುತ್ತೇವೆ: ಡಾ.ಜಿ.ಪರಮೇಶ್ವರ್

Update: 2018-06-04 17:05 GMT

ಬೆಂಗಳೂರು, ಜೂ.4: ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಎಸ್.ಆರ್.ಪಾಟೀಲ್ ಅವರು ಎಐಸಿಸಿ ಅಧ್ಯಕ್ಷರಿಗೆ ಯಾಕೆ ರಾಜೀನಾಮೆ ಸಲ್ಲಿಸಿದ್ದಾರೆಂಬ ಸ್ಪಷ್ಟ ಮಾಹಿತಿ ಇಲ್ಲ. ಆದರೆ, ಅವರಿಗೆ ಯಾವುದಾದರು ಕಾರಣಕ್ಕೆ ಅಸಮಾಧಾನವಾಗಿದ್ದರೆ, ಸಮಾಧಾನಪಡಿಸುವ ಕಾರ್ಯ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ಧಾರೆ.

ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆಯ ವಿಶೇಷ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಎಸ್.ಆರ್.ಪಾಟೀಲ್‌ರ ಬಾಗಲಕೋಟೆ ನಿವಾಸದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರಿಂದ ಅಸಮಾಧಾನಗೊಂಡಿರಬಹುದು. ಹೀಗಾಗಿ, ಅವರೊಂದಿಗೆ ಚರ್ಚಿಸಿ ಅವರನ್ನು ಸಮಾಧಾನಪಡಿಸುತ್ತೇವೆ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವರ ನೇಮಕದಲ್ಲಿ, ಖಾತೆ ಹಂಚಿಕೆಯಲ್ಲಿ ಯಾವುದೆ ಅಸಮಾಧಾನವಿಲ್ಲ. ಹಾಗೆಯೇ ಯಾವುದೇ ಅಸಮಾಧಾನ ಆಗದಂತೆ ಮೈತ್ರಿ ಸರಕಾರ ನಡೆಸುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News