ಸುನಂದಾ ಪುಷ್ಕರ್ ಸಾವು ಪ್ರಕರಣ: ಶಶಿ ತರೂರ್ ಗೆ ಸಮನ್ಸ್ ಜಾರಿ
Update: 2018-06-05 11:56 GMT
ಹೊಸದಿಲ್ಲಿ, ಜೂ.5: ಸುನಂದಾ ಪುಷ್ಕರ್ ಸಾವು ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ಶಶಿ ತರೂರ್ ಗೆ ದಿಲ್ಲಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಸುನಂದಾ ಸಾವು ಪ್ರಕರಣದ ಆರೋಪ ಪಟ್ಟಿಯಲ್ಲಿ ಶಶಿ ತರೂರ್ ಹೆಸರು ಉಲ್ಲೇಖಿಸಲಾಗಿದೆ. ಅವರನ್ನು ವಿಚಾರಣೆಗೆ ಗುರಿಪಡಿಸಲು ಸಾಕ್ಷ್ಯಗಳಿವೆ ಎಂದಿರುವ ಕೋರ್ಟ್ ಜುಲೈ 7ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.