ಬಿಜೆಪಿ ಭ್ರಮಾ ಲೋಕದಲ್ಲಿದೆ: ಎಚ್.ಡಿ.ಕುಮಾರಸ್ವಾಮಿ

Update: 2018-06-05 13:18 GMT

ಬೆಂಗಳೂರು, ಜೂ.5: ರಾಜ್ಯದಲ್ಲಿರುವ ಜೆಡಿಎಸ್-ಕಾಂಗ್ರೆಸ್ ಸರಕಾರ ಬಿದ್ದು ಹೋಗುತ್ತದೆ ಎಂದು ಹೇಳಿಕೊಳ್ಳುತ್ತಿರುವ ಬಿಜೆಪಿ ಭ್ರಮಾ ಲೋಕದಲ್ಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದರು.

ಮಂಗಳವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರಕಾರ, ಏನೋ ಆಗಿ ಬಿಡುತ್ತದೆ ಎಂದು ಬಿಜೆಪಿ ನಾಯಕರು ಕಾಯುತ್ತಿದ್ದಾರೆ. ಆದರೆ, ಅವರ ನಿರೀಕ್ಷೆ ಹುಸಿಯಾಗಲಿದ್ದು, ಅವರೆಲ್ಲಾ ಭ್ರಮಾ ಲೋಕದಲ್ಲೇ ಇರಲಿ ಎಂದರು.

ರಾಜ್ಯದಲ್ಲಿ ಆಗಿರುವ ಮಳೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೆ. ಎಲ್ಲ ಉಸ್ತುವಾರಿ ಕಾರ್ಯದರ್ಶಿ ಜಿಲ್ಲೆಗಳಿಗೆ ಹೋಗಿ ವರದಿ ನೀಡಿದ್ದಾರೆ. ಎಲ್ಲೂ ಯಾವುದೇ ಸಮಸ್ಯೆ ಇಲ್ಲ. ಮಳೆಯಿಂದ ತೊಂದರೆಗೊಳಗಾದರೆ ಪರಿಹಾರ ಕಾರ್ಯಗಳಿಗೆ 125 ಕೋಟಿ ರೂ.ಗಳನ್ನು ಜಿಲ್ಲಾಧಿಕಾರಿಗಳಿಗೆ ಒದಗಿಸಲಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News