ಬೆಂಗಳೂರು: ಜೂಜಾಡುತ್ತಿದ್ದ ಆರು ಜನರ ಬಂಧನ

Update: 2018-06-06 15:07 GMT

ಬೆಂಗಳೂರು, ಜೂ.6: ಹಣ ಪಣವಾಗಿ ಕಟ್ಟಿಕೊಂಡು ಜೂಜಾಟ ನಡೆಸುತ್ತಿದ್ದ ಆರೋಪದ ಮೇಲೆ ಆರು ಜನರನ್ನು ಸಿಸಿಬಿ ಪೊಲೀಸರು ಬಂಧಿಸಿ, 21 ಸಾವಿರ ರೂ. ನಗದು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಅರವಿಂದ್ (26), ಶಿವಕುಮಾರ್(26), ರಮೇಶ್(30), ಭಾವಯ್ಯ (27), ವೆಂಕಟೇಶ್(31), ಶ್ರೀಕಾಂತ(30), ಗೋಪಾಲ(29), ಮಂಜುನಾಥ(28) ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.

ನಗರದ ಬನ್ನೇರುಘಟ್ಟ ರಸ್ತೆಯ ಸ್ಪಾರ್ ಹೈಪರ್ ಮಾರ್ಕೆಟ್ ಎದುರು ಕಟ್ಟಡದಲ್ಲಿ ಹಣವನ್ನು ಪಣವಾಗಿ ಕಟ್ಟಿಕೊಂಡು ಜೂಜಾಟ ಆಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿದ ಸಿಸಿಬಿ ಪೊಲೀಸರು ದಾಳಿ ನಡೆಸಿ 21 ಸಾವಿರ ರೂ.ನಗದು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳ ವಿರುದ್ಧ ತಿಲಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News