ಮೈಸೂರು: 'ಕಾಲಾ' ಚಿತ್ರ ಪ್ರದರ್ಶನ ರದ್ದುಗೊಳಿಸುವಂತೆ ಒತ್ತಾಯಿಸಿ ಧರಣಿ

Update: 2018-06-06 15:21 GMT

ಮೈಸೂರು,ಜೂ.6: ಕರ್ನಾಟಕದಲ್ಲಿ ನಟ ರಜನಿಕಾಂತ್ ಅವರ ಕಾಲಾ ಚಿತ್ರ ಪ್ರದರ್ಶನ ರದ್ದುಗೊಳಿಸುವಂತೆ ಆಗ್ರಹಿಸಿ ಮೈಸೂರು ಕನ್ನಡ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಕಾಡಾ ಕಚೇರಿ ಎದುರು ಬುಧವಾರ ಜಮಾಯಿಸಿದ ಪ್ರತಿಭಟನಾಕಾರರು ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಾವೇರಿ ವಿಚಾರದಲ್ಲಿ ರಜನಿಕಾಂತ್ ನೀಡಿದ ಹೇಳಿಕೆ ಖಂಡಿಸಿ, ರಜನಿಕಾಂತ್ ವಿರುದ್ಧ  ಘೋಷಣೆಗಳನ್ನು ಕೂಗಿದರು. ಕರ್ನಾಟಕದಲ್ಲಿ ರಜನಿಕಾಂತ್ ಅವರ ಕಾಲಾ ಚಿತ್ರ ಪ್ರದರ್ಶನ ರದ್ದುಗೊಳಿಸುವಂತೆ ಆಗ್ರಹಿಸಿದರಲ್ಲದೇ, ಕಾಲ ಚಿತ್ರ ಬಿಡುಗಡೆಯಾದರೆ ತೀವ್ರ ಹೋರಾಟದ ಎಚ್ಚರಿಕೆಯನ್ನು ನೀಡಿದರು.

ಪ್ರತಿಭಟನೆಯಲ್ಲಿ ವೇದಿಕೆಯ ಅಧ್ಯಕ್ಷ ಬಾಲಕೃಷ್ಣ, ರಾಧಾಕೃಷ್ಣ, ಪ್ಯಾಲೇಸ್ ಬಾಬು, ನಾಲಾಬೀದಿ ರವಿ, ಬೋಗಾದಿ ಸಿದ್ದೇಗೌಡ, ಗುರುಬಸಪ್ಪ, ಮಹದೇವಸ್ವಾಮಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News