ಶಾಮನೂರು ಶಿವಶಂಕರಪ್ಪಗೆ ತಪ್ಪಿದ ಸಚಿವ ಸ್ಥಾನ: ಪಾಲಿಕೆ ಸದಸ್ಯ ರಾಜೀನಾಮೆ

Update: 2018-06-06 17:04 GMT

ದಾವಣಗೆರೆ,ಜೂ.06: ಕಾಂಗ್ರೆಸ್ ನ ಹಿರಿಯ ಮುಖಂಡ ಹಾಗೂ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ದಾವಣಗೆರೆ ಕಾಂಗ್ರೆಸ್ ಪಾಲಿಕೆ ಸದಸ್ಯ ಶಿವಗಂಗಾ ಬಸವರಾಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 

ದಾವಣಗೆರೆ 26 ವಾರ್ಡ್‍ನ ನಗರ ಪಾಲಿಕೆ ಸದಸ್ಯರಾಗಿರುವ  ಶಿವಗಂಗಾ ಬಸವರಾಜ್ ಮಹಾನಗರ ಪಾಲಿಕೆ ಆಯುಕ್ತರನ್ನ ಭೇಟಿ ಮಾಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಬುಧವಾರ ನೀಡಿದರು. 

ಈ ವೇಳೆ ಮಾತನಾಡಿದ ಅವರು, ಶಾಮನೂರು ಶಿವಶಂಕರಪ್ಪ ಅವರು ಕಳೆದ 45 ವರ್ಷಗಳಿಂದ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದರು. ಅಂತಹ ನಾಯಕನಿಗೆ ಸಚಿವ ಸ್ಥಾನ ನೀಡದೆ ವೀರಶೈವ ಲಿಂಗಾಯತರಿಗೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಸಚಿವ ಸ್ಥಾನ ನೀಡದಿದ್ದರೆ ಮಹಾನಗರ ಪಾಲಿಕೆಯ 39 ಸದಸ್ಯರು ಕೂಡ ರಾಜೀನಾಮೆ ನೀಡುವುದಾಗಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News