ಅಬ್ದುಲ್ ರಝಾಕ್
Update: 2018-06-07 07:04 GMT
ಮಂಗಳೂರು, ಜೂ.7: ಮೂಲತಃ ಅಡ್ಯಾರ್ ಕಣ್ಣೂರಿನ ಪ್ರಸ್ತುತ ಜೆಪ್ಪು ಮಹಾಕಾಳಿಪಡ್ಪು ನಿವಾಸಿ ಅಬ್ದುಲ್ ರಝಾಕ್ (62) ಗುರುವಾರ ಬೆಳಗ್ಗೆ ಸ್ವಗೃಹದಲ್ಲಿ ನಿಧನರಾದರು.
ಅಲ್ಪಕಾಲದ ಅಸೌಖ್ಯದಿಂದಿದ್ದ ಅವರು ಎರಡು ದಿನದ ಹಿಂದೆಯಷ್ಟೇ ಆಸ್ಪತ್ರೆಯಿಂದ ಮನೆಗೆ ಮರಳಿದ್ದರು. ಸ್ಥಳೀಯ ಜುಮಾ ಮಸೀದಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಅವರು ಎಸ್ಕೆಎಸ್ಸೆಸ್ಸೆಫ್ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು. ಅಲ್ಲದೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿಯೂ ಕಾರ್ಯ ನಿರ್ವಹಿಸಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.