ಹೈಕಮಾಂಡ್ ಮಟ್ಟದಲ್ಲಿ ಖಾತೆಗಳ ಹಂಚಿಕೆ ನಿರ್ಧಾರ: ಡಾ.ಜಿ.ಪರಮೇಶ್ವರ್

Update: 2018-06-07 14:37 GMT

ಬೆಂಗಳೂರು, ಜೂ.7: ನಮ್ಮ ಪಾಲಿಗೆ ಹಂಚಿಕೆಯಾಗಿರುವ ಖಾತೆಗಳು ಹೈಕಮಾಂಡ್ ಮಟ್ಟದಲ್ಲಿ ನಿರ್ಧರಿಸಲ್ಪಟ್ಟಿವೆ. ಮಾಜಿ ಸಚಿವ ಎಂ.ಬಿ.ಪಾಟೀಲ್ ಮನವೊಲಿಕೆಗೆ ನಾನು ತೆರಳುತ್ತೇನೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಎರಡು ಶರತ್ತುಗಳನ್ನು ನಮಗೆ ವಿಧಿಸಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಹಲವರಿಗೆ ಅವಕಾಶ ಸಿಗುವ ಸಾಧ್ಯತೆಗಳಿವೆ ಎಂದರು.

ಅತೃಪ್ತ ಶಾಸಕರನ್ನು ಸೆಳೆಯಲು ಬಿಜೆಪಿ ಮುಂದಾಗಿದೆ. ಅವರ ಗಾಳಕ್ಕೆ ನಮ್ಮವರು ಬೀಳುವುದಿಲ್ಲ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆಯಾಗುವುದು ಖಚಿತ. ಸಂಪುಟ ವಿಸ್ತರಣೆ, ಪುನರ್ ರಚನೆ ಇರುತ್ತದೆ. ಆಗ ಹಲವರಿಗೆ ಅವಕಾಶಗಳು ಸಿಗುತ್ತವೆ ಎಂದು ಅವರು ಹೇಳಿದರು.

ನಮಗೆ ಸಿಗುವ ನಿಗಮ, ಮಂಡಳಿಗಳಲ್ಲಿ ಶೇ.50ರಷ್ಟು ಶಾಸಕರಿಗೆ ಹಾಗೂ ಇನ್ನುಳಿದ ಶೇ.50ರಷ್ಟು ಕಾರ್ಯಕರ್ತರಿಗೆ ಹಂಚಿಕೆ ಮಾಡಲಾಗುವುದು ಎಂದು ಪರಮೇಶ್ವರ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News