ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ: ಡಾ.ಕೆ.ಸುಧಾಕರ್

Update: 2018-06-07 14:59 GMT

ಬೆಂಗಳೂರು, ಜೂ.7: ನಾನು ನನ್ನ ಕ್ಷೇತ್ರದ ಮತದಾರರ ಜೊತೆ ಚರ್ಚಿಸುತ್ತೇನೆ. ಅವರ ಸಲಹೆಯಂತೆ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ಒಂದು ವೇಳೆ ಶಾಸಕ ಸ್ಥಾನವೇ ಬೇಡ ಎಂದರೆ ಅದಕ್ಕೂ ಸಿದ್ಧ ಎಂದು ಸಚಿವ ಸ್ಥಾನ ವಂಚಿತ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಗೆಂದು ನಾನು ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಹೋಗುವುದಿಲ್ಲ. ನಮಗೆ ಸಚಿವ ಸ್ಥಾನದ ಭರವಸೆ ನೀಡಿ ತಪ್ಪಿಸಿದ್ದು ಏಕೆ? ಎಂಬುದರ ಕುರಿತು ನಾವೆಲ್ಲರೂ ಸೇರಿ ಚರ್ಚೆ ನಡೆಸಿದ್ದೇವೆ. ನಾವು ನಮ್ಮ ನಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಿದ್ದೇವೆ ಎಂದರು.

ನನಗೆ ಸಚಿವ ಸ್ಥಾನ ತಪ್ಪಿಸುವ ಮೊದಲು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಒಮ್ಮೆ ಯೋಚಿಸಬೇಕಿತ್ತು. ನನಗೆ ಸಚಿವ ಸ್ಥಾನ ತಪ್ಪಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಣವೋ, ಸಂಸದ ಎಂ.ವೀರಪ್ಪಮೊಯ್ಲಿ ಕಾರಣವೋ ಗೊತ್ತಿಲ್ಲ. ಆದರೆ, ನನಗೆ ಅನ್ಯಾಯವಾಗಿರುವುದು ಮಾತ್ರ ಸತ್ಯ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News