ಅಮಿತ್ ಶೂಟೌಟ್ ಪ್ರಕರಣ: ಆರೋಪಿ ರಾಜೇಶ್‌ಗೆ ಜಾಮೀನು ನೀಡಲು ನಿರಾಕರಿಸಿದ ಹೈಕೋರ್ಟ್

Update: 2018-06-07 16:13 GMT

ಬೆಂಗಳೂರು, ಜೂ.7: ವಕೀಲ ಅಮಿತ್ ಶೂಟೌಟ್ ಪ್ರಕರಣದ ಮೊದಲ ಆರೋಪಿ ರಾಜೇಶ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಈ ಸಂಬಂಧ ಆರೋಪಿ ರಾಜೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ನಾ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತು.

ಆರೋಪಿ ರಾಜೇಶ್ ಪತ್ನಿ ಪಿಡಿಓ ಶೃತಿಗೌಡ ಹಾಗೂ ವಕೀಲ ಅಮಿತ್ ನಡುವೆ ಅನೈತಿಕ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ರಾಜೇಶ್, ವಕೀಲ ಅಮಿತ್‌ಗೆ ಹೆಸರಘಟ್ಟ ಮುಖ್ಯರಸ್ತೆಯಲ್ಲಿನ ಆಚಾರ್ಯ ಕಾಲೇಜು ಸಮೀಪ ರಿವಾಲ್ವರ್‌ನಿಂದ ಗುಂಡು ಹೊಡೆದಿದ್ದನು. ಈ ಹಿನ್ನೆಲೆಯಲ್ಲಿ ಅಮಿತ್ ಸಾವನ್ನಪ್ಪಿದ್ದನು.

ಈ ಸಂಬಂಧ ಸೋಲದೇವನಹಳ್ಳಿ ಪೊಲೀಸರು ರಾಜೇಶ್‌ನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಹೀಗಾಗಿ, ಆರೋಪಿಯು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದನು. ಆದರೆ, ನ್ಯಾಯಾಲು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಅಲ್ಲದೆ, ಅಮಿತ್ ಮೇಲೆ ಶೂಟೌಟ್ ನಡೆದ ನಂತರ ಶೃತಿಗೌಡ ಆತ್ಮಹತ್ಯೆಗೆ ಶರಣಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News