ಗುಂಡ್ಲುಪೇಟೆ: ಅಪಘಾತದಲ್ಲಿ ಮೆದುಳು ನಿಷ್ಕ್ರಿಯವಾಗಿದ್ದ ಯುವಕನ ದೇಹ ದಾನ

Update: 2018-06-07 16:48 GMT

ಗುಂಡ್ಲುಪೇಟೆ,ಜೂ.07: ರಸ್ತೆ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟು ಬಿದ್ದು ಮೆದುಳು ನಿಷ್ಕ್ರಿಯವಾಗಿದ್ದ ಯುವಕನ ಅಂಗಾಂಗವನ್ನು ಪೋಷಕರು ವೈದ್ಯಕೀಯ ಉಪಯೋಗಕ್ಕಾಗಿ ದಾನ ನೀಡಿದ ಘಟನೆ ನಡೆದಿದೆ.

ಜೂನ್ 6ರಂದು ಸಂಜೆ ಪಟ್ಟಣದ ಹೊರವಲಯದಲ್ಲಿ ಆಟೋ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ತಾಲೂಕಿನ ಅಂಕಹಳ್ಳಿ ಗ್ರಾಮದ ಶಿವಲಿಂಗಯ್ಯ ಎಂಬವರ ಪುತ್ರ ಅವಿನಾಶ್ (23) ತಲೆಗೆ ತೀವ್ರ ಪೆಟ್ಟು ಬಿದ್ದು ಮೆದುಳು ನಿಷ್ಕ್ರಿಯಗೊಂಡಿತ್ತು. ಈ ಹಿನ್ನೆಲೆಯಲ್ಲಿ ಈತನ ಪೋಷಕರು ದೇಹದ ಅಂಗಾಂಗಗಳು ಬೇರೆಯವರಿಗೆ ಉಪಯೋಗವಾಗಲಿ ಎಂಬ ಭಾವನೆಯಿಂದ ಮೈಸೂರಿನ ಜೆ ಎಸ್ ಎಸ್ ಆಸ್ಪತ್ರೆಗೆ ದಾನ ಮಾಡಿದ್ದಾರೆ.

ಅವಿನಾಶ್ ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ಬಿಎ ತರಗತಿಯ ಪರೀಕ್ಷೆ ಬರೆದು, ಫಲಿತಾಂಶದ ನಿರೀಕ್ಷೆಯಲ್ಲಿದ್ದರು ಎಂದು ಕಾಲೇಜಿನ ಪ್ರಾಂಶುಪಾಲ ಹೆಚ್.ಕೆ.ಮಲ್ಲೇಶ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News